ಬ್ರೇಕಿಂಗ್ ನ್ಯೂಸ್
04-03-26 09:31 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 4: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ 6 ಮಂದಿ ಸದಸ್ಯರ ಅಧ್ಯಯನ ಸಮಿತಿಯನ್ನು ಸರಕಾರ ನೇಮಿಸಿತ್ತು.
ಸದ್ರಿ ಸಮಿತಿಯು ಜನವರಿ 19 ಹಾಗೂ 20ರಂದು ಆಂಧ್ರಪ್ರದೇಶ ರಾಜ್ಯದ ಸಚಿವಾಲಯ, ವಿವಿಧ ಇಲಾಖೆ, ಕಚೇರಿಗಳಿಗೆ ಭೇಟಿ ನೀಡಿ ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳು ಹಾಗೂ ವಿಧಿ ವಿಧಾನಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿತ್ತು.
ಸಮಿತಿಯ ವರದಿಯನ್ನು ವಿಕಾಸ ಸೌಧದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಾರ್ಯದರ್ಶಿ ಜೆ.ಮಂಜುನಾಥ್ ಅವರಿಗೆ ಅಧ್ಯಯನ ಸಮಿತಿ ಸದಸ್ಯರು ಸಲ್ಲಿಸಿದರು. ತುಳು ಭಾಷೆಯ ಹಿನ್ನೆಲೆ ಹಾಗೂ ಚರಿತ್ರೆಯ ಬಗೆಗಿನ ಪ್ರಸ್ತಾವನೆಯನ್ನು ಕೂಡ ವರದಿ ಜೊತೆಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಅಧ್ಯಯನ ಸಮಿತಿ ಸದಸ್ಯರಾದ ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ ಶೆಟ್ಟಿ, ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ಶ್ರೀಮತಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಶ್ರೀಮತಿ ಕೆ.ಎಂ ಶುಭಶ್ರೀ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಉಪಸ್ಥಿತರಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm