ಬ್ರೇಕಿಂಗ್ ನ್ಯೂಸ್
05-03-26 12:42 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 4: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು, ಸ್ಥಳೀಯರು ಅಚ್ಚರಿಗೆ ಒಳಗಾಗಿದ್ದಾರೆ. ಈ ಬಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯ ಶಾಸಕ ಸ್ಪೀಕರ್ ಯು.ಟಿ. ಖಾದರ್ ತನಿಖೆಗೆ ಸೂಚಿಸಿದ್ದಾರೆ.
ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಬಳಿಕ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿರುವುದು ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್ಗಳೆಂದು ಸ್ಥಳೀಯರು ತಿಳಿಸಿದ್ದಾರೆ. ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಅವರು ಮಾಹಿತಿ ನೀಡಿದ್ದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್ಗಳು ನದಿ ಬದಿಯಲ್ಲಿ ಚದುರಿ ಬಿದ್ದಿದ್ದವು. ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಪ್ರತಿಕ್ರಿಯಿಸಿ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ನದಿಗೆ ತಲುಪಿದ್ದು ಹೇಗೆ ಎನ್ನುವುದು ಅಚ್ಚರಿಯಾಗಿದೆ. ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಆಧಾರ್ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದಿದ್ದಾರೆ.
ಈ ಬಗ್ಗೆ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಸ್ಥಳೀಯ ಶಾಸಕರಿಗೂ ಗ್ರಾಮ ಪಂಚಾಯತ್ ವತಿಯಿಂದ ದೂರು ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm