ಬ್ರೇಕಿಂಗ್ ನ್ಯೂಸ್
05-03-26 12:42 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 4: ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು, ಸ್ಥಳೀಯರು ಅಚ್ಚರಿಗೆ ಒಳಗಾಗಿದ್ದಾರೆ. ಈ ಬಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯ ಶಾಸಕ ಸ್ಪೀಕರ್ ಯು.ಟಿ. ಖಾದರ್ ತನಿಖೆಗೆ ಸೂಚಿಸಿದ್ದಾರೆ.
ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಬಳಿಕ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿರುವುದು ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್ಗಳೆಂದು ಸ್ಥಳೀಯರು ತಿಳಿಸಿದ್ದಾರೆ. ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಅವರು ಮಾಹಿತಿ ನೀಡಿದ್ದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್ಗಳು ನದಿ ಬದಿಯಲ್ಲಿ ಚದುರಿ ಬಿದ್ದಿದ್ದವು. ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಪ್ರತಿಕ್ರಿಯಿಸಿ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ನದಿಗೆ ತಲುಪಿದ್ದು ಹೇಗೆ ಎನ್ನುವುದು ಅಚ್ಚರಿಯಾಗಿದೆ. ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಆಧಾರ್ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದಿದ್ದಾರೆ.
ಈ ಬಗ್ಗೆ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಸ್ಥಳೀಯ ಶಾಸಕರಿಗೂ ಗ್ರಾಮ ಪಂಚಾಯತ್ ವತಿಯಿಂದ ದೂರು ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm