ಬ್ರೇಕಿಂಗ್ ನ್ಯೂಸ್
05-03-26 02:34 pm HK News Staffer ಕರಾವಳಿ
ಉಳ್ಳಾಲ, ಮಾ.5: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ.
ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.


ಅರಣ್ಯಾಧಿಕಾರಿ ಮೆಹಬೂಬ್ ಸಾಬ್(35) ಅವರು ತನ್ನ ಪತ್ನಿ ಫರ್ಝಾನ ಮೆಹಬೂಬ್ ಮತ್ತು ಪುಟ್ಟ ಮಗುವಿನೊಂದಿಗೆ ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಕಳೆದ ಆರು ತಿಂಗಳುಗಳಿಂದ ವಾಸವಿದ್ದರು. ಕಳೆದ ಶುಕ್ರವಾರ ಮಧ್ಯಾಹ್ನ ಮೆಹಬೂಬ್ ಅವರು ಕುಟುಂಬದೊಂದಿಗೆ ತನ್ನ ಊರು ಕೊಪ್ಪಳಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಒಂಬತ್ತು ಗಂಟೆ ವೇಳೆಗೆ ಮೆಹಬೂಬ್ ಅವರು ತನ್ನ ಕುಟುಂಬ ಸಮೇತ ಕಾಪಿಕಾಡಿನ ಮನೆಗೆ ವಾಪಸಾದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯೊಳಗೆ ನುಗ್ಗಿದ ಕಳ್ಳರು ಹಾಲ್ ಮತ್ತು ಎರಡು ಕೋಣೆಯೊಳಗಿನ ಕಪಾಟುಗಳನ್ನ ಜಾಲಾಡಿದ್ದು, ಲಾಕರ್ ಗಳಲ್ಲಿದ್ದ 181 ಗ್ರಾಂ ಚಿನ್ನ, ಮಗುವಿನ ಬೆಳ್ಳಿಯ ಆಭರಣಗಳು ಹಾಗೂ ಮೆಹಬೂಬ್ ಅವರು ಬ್ಯಾಂಕಿನಿಂದ ಸಾಲ ಪಡೆದಿದ್ದ ಹತ್ತೂವರೆ ಲಕ್ಷ ರೂಪಾಯಿ ನಗದನ್ನ ದೋಚಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಕಾಪಿಕಾಡು ಪ್ರದೇಶದಲ್ಲಿ ಸಾಕಷ್ಟು ಮನೆಗಳಿದ್ದರೂ ಕಳ್ಳತನ ಯಾವಾಗ ನಡೆದಿದೆಯೆಂದು ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ. ಕಳ್ಳತನ ನಡೆದ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲದೆ ಪೊಲೀಸರಿಗೆ ಪ್ರಕರಣದ ತನಿಖೆ ಸವಾಲಾಗಿ ಪರಿಣಮಿಸಿದೆ.
ಕೆಲ ವರುಷಗಳ ಹಿಂದಷ್ಟೆ ಅರಣ್ಯಾಧಿಕಾರಿ ನೆಲೆಸಿರುವ ಪಕ್ಕದ ಮನೆಯಲ್ಲೂ ಮನೆ ಕಳ್ಳತನ ನಡೆದಿತ್ತು. ಅಂದು ಕೂಡ ಮನೆ ಮಂದಿ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಕಳ್ಳತನ ನಡೆಸಿದ್ದಲ್ಲದೆ, ಅಡುಗೆ ಕೋಣೆಯಲ್ಲಿದ್ದ ಊಟವನ್ನೂ ಉಂಡು ಹೋಗಿದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm