ಬ್ರೇಕಿಂಗ್ ನ್ಯೂಸ್
06-03-26 12:17 pm supritha Jain ಕರಾವಳಿ
ಮಂಗಳೂರು, ಮಾರ್ಚ್ 06: ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ 2′ ಬಿಡುಗಡೆಗೂ ಮುನ್ನವೇ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿತ್ತು. ಚಿತ್ರದಲ್ಲಿನ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರದ ವಿಷಯಗಳ ಚಿತ್ರಣ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತದೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಇದರ ಸುತ್ತ ಹೊಸ ವಿವಾದಗಳು ಸೃಷ್ಟಿಯಾಗಿದೆ.
ಪುತ್ತೂರಿನ ಜಿಎಲ್ ಒನ್ ಮಾಲ್ನಲ್ಲಿ ಸೀತಾ ಪರಿವಾರ ಸಂಘಟನೆಯ ವತಿಯಿಂದ 16 ರಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸಿನಿಮಾ ಪ್ರದರ್ಶನ ಆಯೋಜಿಸಲಾಗಿತ್ತು. ನಿನ್ನೆ ಸಂಜೆ ಮೂರು ಪ್ರದರ್ಶನಗಳು ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕೆಲವು ರಾಜಕೀಯ ಹಾಗೂ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯಕ್ರಮದ ಕುರಿತು ವಿವಾದಾತ್ಮಕ ಸಂದೇಶಗಳು ಹರಿದಾಡಿದ್ದು, ಮಾಲ್ ಅನ್ನು ಬಹಿಷ್ಕರಿಸುವಂತೆ ಕೆಲವರು ಕರೆ ನೀಡಿರುವ ಆರೋಪಗಳು ಕೇಳಿಬಂದಿವೆ. ಜೊತೆಗೆ ಮುಸ್ಲಿಂ ಸಮುದಾಯದ ಯುವತಿಯರು ಮಾಲ್ಗೆ ಹೋಗುವಾಗ ಎಚ್ಚರಿಕೆ ವಹಿಸಬೇಕು ಎಂಬ ರೀತಿಯ ಸಂದೇಶಗಳೂ ವೈರಲ್ ಆಗಿದ್ದು, ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.
ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆಗಳು ಬಂದಿರುವ ಆರೋಪವೂ ಕೇಳಿಬಂದಿದೆ. ಕಾರ್ಯಕ್ರಮದ ಬುಕ್ಕಿಂಗ್ಗಾಗಿ ನೀಡಲಾಗಿದ್ದ ಮಹಿಳೆಯರ ಮೊಬೈಲ್ ಸಂಖ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕೆಲ ಕರೆಗಳು ವಿದೇಶಗಳಿಂದ ಬಂದಿರುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿ, ಸ್ಥಳೀಯ ಹಾಗೂ ವಿದೇಶ ಮೂಲದ ಕೆಲ ಶಕ್ತಿಗಳು ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ಜಗ್ಗದೆ ಸಮಾಜದಲ್ಲಿ ಜಾಗೃತಿ ಕಾರ್ಯ ಮುಂದುವರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಭದ್ರತೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm