ಬ್ರೇಕಿಂಗ್ ನ್ಯೂಸ್
06-03-26 04:08 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 06: ಸೈಬರ್ ಅಪರಾಧಿಗಳು ಇದೀಗ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಅವರ ಜೀವಮಾನದ ಉಳಿತಾಯಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೇ ರೀತಿಯ ಮತ್ತೊಂದು ಗಂಭೀರ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೊಬೈಲ್ ಹ್ಯಾಕ್ ಮಾಡಿ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರ ಖಾತೆಯಿಂದ ಬರೋಬ್ಬರಿ ₹28.46 ಲಕ್ಷ ಹಣವನ್ನು ದೋಚಿರುವುದು ಬೆಳಕಿಗೆ ಬಂದಿದೆ.
ಮೊಬೈಲ್ ಹ್ಯಾಕ್ ಮಾಡಿ ಹಣ ಲೂಟಿ ;
ಮಂಗಳೂರಿನ ನಿವಾಸಿಯಾಗಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಮಹಿಳೆಯೇ ವಂಚನೆಗೆ ಒಳಗಾದವರು. ಬ್ಯಾಂಕ್ ಸೇವೆಯಿಂದ ನಿವೃತ್ತಿಯಾದ ಬಳಿಕ ಅವರಿಗೆ ಬಂದ ನಿವೃತ್ತಿ ವೇತನದ ಹಣವನ್ನು ಯುನಿಯನ್ ಬ್ಯಾಂಕ್ ಆಫ್ ಇಂಡಿಯಾಯಲ್ಲಿರುವ ತಮ್ಮ ನಾಲ್ಕು ವಿಭಿನ್ನ ಖಾತೆಗಳಲ್ಲಿ ಜಮಾ ಮಾಡಿಟ್ಟಿದ್ದರು.
ಮಾರ್ಚ್ 3ರಂದು ರಾತ್ರಿ ಸುಮಾರು 9.30ರ ವೇಳೆಗೆ ಅವರ ಮೊಬೈಲ್ ಫೋನ್ ಅಚಾನಕ್ ಹ್ಯಾಕ್ ಆಗಿದೆ. ಮೊಬೈಲ್ ಹ್ಯಾಕ್ ಆದ ಬಳಿಕ ಫೋನ್ಗೆ ಬರುವ ಎಲ್ಲಾ ಇನ್ಕಮಿಂಗ್ ಕರೆಗಳು ಸ್ಥಗಿತಗೊಂಡಿವೆ. ಇದರಿಂದ ಅನುಮಾನಗೊಂಡ ಮಹಿಳೆ ಫೋನ್ ಪರಿಶೀಲಿಸುತ್ತಿದ್ದ ವೇಳೆ, ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುತ್ತಿರುವ ಕುರಿತು ಸರಣಿ ಎಸ್ಎಂಎಸ್ ಸಂದೇಶಗಳು ಬರತೊಡಗಿವೆ.
ನಾಲ್ಕು ಖಾತೆಗಳಿಂದ 28.46 ಲಕ್ಷ ವರ್ಗಾವಣೆ;
ಅಪರಿಚಿತ ಸೈಬರ್ ಕಳ್ಳರು ಮಹಿಳೆಯ ನಾಲ್ಕು ಬ್ಯಾಂಕ್ ಖಾತೆಗಳಿಂದ ಒಟ್ಟು 28,46,688 ಲಕ್ಷ ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿರುವುದು ತಿಳಿದುಬಂದಿದೆ.
ಹಣ ಕಟ್ ಆಗುತ್ತಿರುವುದು ಗೊತ್ತಾಗುತ್ತಿದ್ದಂತೆಯೇ ಮಹಿಳೆ ತಕ್ಷಣವೇ ಬ್ಯಾಂಕ್ ಹೆಲ್ಪ್ಲೈನ್ ಸಂಖ್ಯೆಗೆ ಕರೆ ಮಾಡಿ ತಮ್ಮ ಬ್ಯಾಂಕ್ ಖಾತೆಗಳು ಹಾಗೂ ಎಟಿಎಂ ಕಾರ್ಡ್ಗಳನ್ನು ಫ್ರೀಜ್ ಮಾಡಿಸಿದ್ದಾರೆ. ನಂತರ ರಾಷ್ಟ್ರೀಯ ಸೈಬರ್ ಅಪರಾಧ ಸಹಾಯವಾಣಿ 1930 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ. ಈ ತಕ್ಷಣದ ಕ್ರಮದಿಂದ ಇನ್ನಷ್ಟು ಹಣ ನಷ್ಟವಾಗುವುದನ್ನು ತಪ್ಪಿಸಲಾಗಿದೆ.
“ಯಾರೋ ಅಪರಿಚಿತ ವ್ಯಕ್ತಿಗಳು ನನ್ನ ಮೊಬೈಲ್ ಹ್ಯಾಕ್ ಮಾಡಿ, ನನ್ನ ಗಮನಕ್ಕೆ ಬಾರದೇ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದಾರೆ. ಪ್ರಕರಣವನ್ನು ಸೂಕ್ತವಾಗಿ ತನಿಖೆ ನಡೆಸಿ ಹಣವನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು” ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣ ವರ್ಗಾವಣೆಯಾದ ಖಾತೆಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am