ಬ್ರೇಕಿಂಗ್ ನ್ಯೂಸ್
09-03-26 02:53 pm HK News Staffer ಕರಾವಳಿ
ಉಳ್ಳಾಲ, ಮಾ.09: ಬೆಂಗಳೂರಿನ ಕಟ್ಟಡವೊಂದರಲ್ಲಿ ಎಸಿ ಜೋಡಣೆ ಕೆಲಸ ನಿರ್ವಹಿಸುತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಲಪಾಡಿ ನಿವಾಸಿಗಳಾದ ವಿಶ್ವನಾಥ್ ಮತ್ತು ಮೀನಾಕ್ಷಿ ದಂಪತಿ ಪುತ್ರ ಹರ್ಷಿತ್ ಪೂಜಾರಿ(32) ಮೃತ ಯುವಕ.
ವಿದೇಶದ ಶಿಪ್ಪಿಂಗ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಹರ್ಷಿತ್ ಮೂರು ತಿಂಗಳಿಗೊಮ್ಮೆ ಸಿಗುವ ರಜೆಯಲ್ಲಿ ಊರಿಗೆ ಮರಳುವಾಗ ತನ್ನ ಮೂಲ ಎಸಿ ಮೆಕ್ಯಾನಿಕ್ ಕೆಲಸವನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಅವರು ಸಂಬಂಧಿಯೋರ್ವರಿಗೆ ಎಸಿ ಮೆಕ್ಯಾನಿಕ್ ತರಬೇತಿ ನೀಡುವ ಸಲುವಾಗಿ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಬಹುಮಹಡಿ ಕಟ್ಟಡದಲ್ಲಿ ಎಸಿ ಜೋಡಣೆ ನಡೆಸುವ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಗಾಯಾಳು ಹರ್ಷಿತ್ ಅವರನ್ನ ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಾ.7 ರಂದು ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಕರೆತರುವ ಸಂದರ್ಭದಲ್ಲಿ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ಮೃತ ಹರ್ಷಿತ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಬೆಳಗ್ಗೆ ನಡೆದಿದೆ. ಹರ್ಷಿತ್ ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಎರಡು ವರ್ಷದ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ. ತಲಪಾಡಿ ಭಾಗದಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಹರ್ಷಿತ್ ಅವರು ಭಜನಾ ಮಂದಿರ ಹಾಗೂ ದೇವಸ್ಥಾನಗಳ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಹರ್ಷಿತ್ ಅವರ ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಕೂಡ ಭಾಗವಹಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am