ಬ್ರೇಕಿಂಗ್ ನ್ಯೂಸ್
09-03-26 09:52 pm HK News Staffer ಕರಾವಳಿ
ಉಳ್ಳಾಲ, ಮಾ.09: ಸುಡುವ ಬಿರು ಬಿಸಿಲಿಗೆ ಮನುಷ್ಯರಲ್ಲದೆ ಮೂಕ ಪ್ರಾಣಿಗಳು ಸಹ ಬಾಯಾರಿಕೆಯಿಂದ ತತ್ತರಿಸುತ್ತಿವೆ. ಬೇಸಿಗೆಯ ಬಿಸಿಲ ಧಗೆಯನ್ನ ತಾಳಲಾರದೆ ಅತ್ತಿತ್ತ ಅಲೆದಾಡುತ್ತಿದ್ದ ಅಳಿಲಿಗೆ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಸಿಬ್ಬಂದಿಯೋರ್ವರು ನೀರು ಕುಡಿಸಿದ್ದು, ದಣಿವಾರಿಸಿಕೊಂಡ ಅಳಿಲು ಪೊಲೀಸಪ್ಪನ ಜೊತೆ ಸ್ನೇಹ ಬೆಳೆಸಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಸಿಬ್ಬಂದಿ ರಮೇಶ್ ಅಸಂಗಿ ಭಾನುವಾರ ಮಂಗಳೂರು ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅವರ ಬೈಕಿನ ಚಕ್ರದ ಮೇಲೆ ದಣಿವಿನಿಂದ ಓಡಾಡುತ್ತಿದ್ದ ಅಳಿಲನ್ನ ಗಮನಿಸಿದ್ದಾರೆ. ತಕ್ಷಣ ತನ್ನ ನೀರಿನ ಬಾಟಲಿಯ ಮುಚ್ಚಳಕ್ಕೆ ನೀರು ಸುರಿದು ಅಳಿಲಿಗೆ ಕುಡಿಸಲು ಪ್ರಯತ್ನಿಸಿದ್ದಾರೆ. ಆರಂಭದಲ್ಲಿ ಅಳಿಲು ಹತ್ತಿರ ಬರಲು ನಿರಾಕರಿಸಿದ್ದು ಬಳಿಕ ರಮೇಶ್ ಅವರ ಕಾಳಜಿಗೆ ಮನಸೋತು ನೀರನ್ನು ಕುಡಿದು ದಣಿವು ನೀಗಿಸಿಕೊಂಡಿದೆ. ದಣಿವನ್ನ ನೀಗಿಸಿಕೊಂಡ ಅಳಿಲು ಮತ್ತೆಲ್ಲೂ ಹೋಗದೆ ರಮೇಶ್ ಅಸಂಗಿ ಅವರ ಜೊತೆಯಲ್ಲೇ ಬಂದಿದ್ದು, ಆ ಅಳಿಲನ್ನ ರಮೇಶ್ ಅವರು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಅಳಿಲಿಗೆ ನೀರುಣಿಸುವ ದೃಶ್ಯವನ್ನು ಮಹೇಶ್ ಅವರು ತಮ್ಮ ಮೊಬೈಲಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಬಿರು ಬಿಸಿಲಿಗೆ ಮೈಯೊಡ್ಡಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ಮೂಕ ಪ್ರಾಣಿಯ ಮೇಲೆ ತೋರಿದ ಕಾಳಜಿಗೆ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದಲ್ಲದೆ, ಮನುಷ್ಯ ಮತ್ತು ಮೂಕ ಪ್ರಾಣಿಯ ನಡುವಿನ ನಿಷ್ಕಲ್ಮಶ ಪ್ರೀತಿಗೂ ಜನರು ಮನಸೋತಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm