ಬ್ರೇಕಿಂಗ್ ನ್ಯೂಸ್
09-03-26 09:52 pm HK News Staffer ಕರಾವಳಿ
ಉಳ್ಳಾಲ, ಮಾ.09: ಸುಡುವ ಬಿರು ಬಿಸಿಲಿಗೆ ಮನುಷ್ಯರಲ್ಲದೆ ಮೂಕ ಪ್ರಾಣಿಗಳು ಸಹ ಬಾಯಾರಿಕೆಯಿಂದ ತತ್ತರಿಸುತ್ತಿವೆ. ಬೇಸಿಗೆಯ ಬಿಸಿಲ ಧಗೆಯನ್ನ ತಾಳಲಾರದೆ ಅತ್ತಿತ್ತ ಅಲೆದಾಡುತ್ತಿದ್ದ ಅಳಿಲಿಗೆ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಸಿಬ್ಬಂದಿಯೋರ್ವರು ನೀರು ಕುಡಿಸಿದ್ದು, ದಣಿವಾರಿಸಿಕೊಂಡ ಅಳಿಲು ಪೊಲೀಸಪ್ಪನ ಜೊತೆ ಸ್ನೇಹ ಬೆಳೆಸಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಸಿಬ್ಬಂದಿ ರಮೇಶ್ ಅಸಂಗಿ ಭಾನುವಾರ ಮಂಗಳೂರು ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅವರ ಬೈಕಿನ ಚಕ್ರದ ಮೇಲೆ ದಣಿವಿನಿಂದ ಓಡಾಡುತ್ತಿದ್ದ ಅಳಿಲನ್ನ ಗಮನಿಸಿದ್ದಾರೆ. ತಕ್ಷಣ ತನ್ನ ನೀರಿನ ಬಾಟಲಿಯ ಮುಚ್ಚಳಕ್ಕೆ ನೀರು ಸುರಿದು ಅಳಿಲಿಗೆ ಕುಡಿಸಲು ಪ್ರಯತ್ನಿಸಿದ್ದಾರೆ. ಆರಂಭದಲ್ಲಿ ಅಳಿಲು ಹತ್ತಿರ ಬರಲು ನಿರಾಕರಿಸಿದ್ದು ಬಳಿಕ ರಮೇಶ್ ಅವರ ಕಾಳಜಿಗೆ ಮನಸೋತು ನೀರನ್ನು ಕುಡಿದು ದಣಿವು ನೀಗಿಸಿಕೊಂಡಿದೆ. ದಣಿವನ್ನ ನೀಗಿಸಿಕೊಂಡ ಅಳಿಲು ಮತ್ತೆಲ್ಲೂ ಹೋಗದೆ ರಮೇಶ್ ಅಸಂಗಿ ಅವರ ಜೊತೆಯಲ್ಲೇ ಬಂದಿದ್ದು, ಆ ಅಳಿಲನ್ನ ರಮೇಶ್ ಅವರು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಅಳಿಲಿಗೆ ನೀರುಣಿಸುವ ದೃಶ್ಯವನ್ನು ಮಹೇಶ್ ಅವರು ತಮ್ಮ ಮೊಬೈಲಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಬಿರು ಬಿಸಿಲಿಗೆ ಮೈಯೊಡ್ಡಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ಮೂಕ ಪ್ರಾಣಿಯ ಮೇಲೆ ತೋರಿದ ಕಾಳಜಿಗೆ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದಲ್ಲದೆ, ಮನುಷ್ಯ ಮತ್ತು ಮೂಕ ಪ್ರಾಣಿಯ ನಡುವಿನ ನಿಷ್ಕಲ್ಮಶ ಪ್ರೀತಿಗೂ ಜನರು ಮನಸೋತಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm