ಬ್ರೇಕಿಂಗ್ ನ್ಯೂಸ್
09-03-26 09:52 pm HK News Staffer ಕರಾವಳಿ
ಉಳ್ಳಾಲ, ಮಾ.09: ಸುಡುವ ಬಿರು ಬಿಸಿಲಿಗೆ ಮನುಷ್ಯರಲ್ಲದೆ ಮೂಕ ಪ್ರಾಣಿಗಳು ಸಹ ಬಾಯಾರಿಕೆಯಿಂದ ತತ್ತರಿಸುತ್ತಿವೆ. ಬೇಸಿಗೆಯ ಬಿಸಿಲ ಧಗೆಯನ್ನ ತಾಳಲಾರದೆ ಅತ್ತಿತ್ತ ಅಲೆದಾಡುತ್ತಿದ್ದ ಅಳಿಲಿಗೆ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಸಿಬ್ಬಂದಿಯೋರ್ವರು ನೀರು ಕುಡಿಸಿದ್ದು, ದಣಿವಾರಿಸಿಕೊಂಡ ಅಳಿಲು ಪೊಲೀಸಪ್ಪನ ಜೊತೆ ಸ್ನೇಹ ಬೆಳೆಸಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸ್ ಸಿಬ್ಬಂದಿ ರಮೇಶ್ ಅಸಂಗಿ ಭಾನುವಾರ ಮಂಗಳೂರು ನಗರದ ಮಹಾಕಾಳಿ ಪಡ್ಪು ಎಂಬಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅವರ ಬೈಕಿನ ಚಕ್ರದ ಮೇಲೆ ದಣಿವಿನಿಂದ ಓಡಾಡುತ್ತಿದ್ದ ಅಳಿಲನ್ನ ಗಮನಿಸಿದ್ದಾರೆ. ತಕ್ಷಣ ತನ್ನ ನೀರಿನ ಬಾಟಲಿಯ ಮುಚ್ಚಳಕ್ಕೆ ನೀರು ಸುರಿದು ಅಳಿಲಿಗೆ ಕುಡಿಸಲು ಪ್ರಯತ್ನಿಸಿದ್ದಾರೆ. ಆರಂಭದಲ್ಲಿ ಅಳಿಲು ಹತ್ತಿರ ಬರಲು ನಿರಾಕರಿಸಿದ್ದು ಬಳಿಕ ರಮೇಶ್ ಅವರ ಕಾಳಜಿಗೆ ಮನಸೋತು ನೀರನ್ನು ಕುಡಿದು ದಣಿವು ನೀಗಿಸಿಕೊಂಡಿದೆ. ದಣಿವನ್ನ ನೀಗಿಸಿಕೊಂಡ ಅಳಿಲು ಮತ್ತೆಲ್ಲೂ ಹೋಗದೆ ರಮೇಶ್ ಅಸಂಗಿ ಅವರ ಜೊತೆಯಲ್ಲೇ ಬಂದಿದ್ದು, ಆ ಅಳಿಲನ್ನ ರಮೇಶ್ ಅವರು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಅಳಿಲಿಗೆ ನೀರುಣಿಸುವ ದೃಶ್ಯವನ್ನು ಮಹೇಶ್ ಅವರು ತಮ್ಮ ಮೊಬೈಲಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಬಿರು ಬಿಸಿಲಿಗೆ ಮೈಯೊಡ್ಡಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ಮೂಕ ಪ್ರಾಣಿಯ ಮೇಲೆ ತೋರಿದ ಕಾಳಜಿಗೆ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದಲ್ಲದೆ, ಮನುಷ್ಯ ಮತ್ತು ಮೂಕ ಪ್ರಾಣಿಯ ನಡುವಿನ ನಿಷ್ಕಲ್ಮಶ ಪ್ರೀತಿಗೂ ಜನರು ಮನಸೋತಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm