ಬ್ರೇಕಿಂಗ್ ನ್ಯೂಸ್
11-03-26 06:26 pm HK News Staffer ಕರಾವಳಿ
ಪುತ್ತೂರು, ಮಾರ್ಚ್ 11: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೂರೈಕೆ ಕೊರತೆಯಿಂದಾಗಿ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.
ದೇವಸ್ಥಾನದಲ್ಲಿ ಪ್ರತಿ ದಿನ ಬೆಳಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನದ ಆಡಳಿತ ಈ ಕ್ರಮ ಕೈಗೊಂಡಿದೆ.
ದೇವಸ್ಥಾನದಲ್ಲಿ ಸದ್ಯಕ್ಕೆ ಕೇವಲ ಮೂರು ದಿನಗಳಿಗೆ ಆಗುವಷ್ಟು ಮಾತ್ರ ಅನಿಲ ದಾಸ್ತಾನು ಲಭ್ಯವಿದೆ. ಅಷ್ಟರೊಳಗೆ ಪೂರೈಕೆ ಸಹಜ ಸ್ಥಿತಿಗೆ ಬಾರದಿದ್ದಲ್ಲಿ ಭಕ್ತರಿಗೆ ನೀಡಲಾಗುವ ಮಧ್ಯಾಹ್ನದ ಭೋಜನ ಪ್ರಸಾದದ ಮೇಲೂ ಪರಿಣಾಮ ಬೀರಲಿದೆ. ಈಗಾಗಲೇ ಅನಿಲ ಪೂರೈಕೆ ಸಂಸ್ಥೆಗೆ ದಿನಕ್ಕೆ ಕನಿಷ್ಠ 20 ಸಿಲಿಂಡರ್ಗಳನ್ನು ಒದಗಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ತುರ್ತು ಪತ್ರ ಬರೆದಿದೆ.
ಮಧ್ಯಾಹ್ನದ ಭೋಜನಕ್ಕೂ ಸಂಕಷ್ಟ?
ಒಂದು ವೇಳೆ ಗ್ಯಾಸ್ ಪೂರೈಕೆ ಪುನರಾರಂಭಗೊಳ್ಳದಿದ್ದರೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭಕ್ತರಿಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am