ಬ್ರೇಕಿಂಗ್ ನ್ಯೂಸ್
12-03-26 02:44 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 12: ಮ್ಯೂಲ್ ಅಕೌಂಟ್ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ ಎಂಬವರನ್ನು ಬಂಧಿಸಲಾಗಿದೆ.
ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್ಗಳು, 18 ಡೆಬಿಟ್ ಕಾರ್ಡ್ಗಳು, 17 ಬ್ಯಾಂಕ್ ಪಾಸ್ಬುಕ್ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ), 1 ಕಾರನ್ನು ವಶಕ್ಕೆ ಪಡೆಯಲಾಗಿದೆ.
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ:
ಚೀನಾ ಲಿಂಕ್ ಹೊಂದಿರುವ ಮ್ಯೂಲ್ ಅಕೌಂಟ್ ದಂಧೆ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ, ಬಂಧಿತ ಆರೋಪಿಗಳು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿಯನ್ನು ಖರೀದಿ ಮಾಡುತ್ತಿದ್ದರು. ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಅವರು ಚೀನಾದ ಸೈಬರ್ ವಂಚಕರೊಂದಿಗೆ ಸಂಪರ್ಕದಲ್ಲಿದ್ದು, ಬಳಿಕ ಅದೇ ಕ್ರಿಪ್ಟೋಕರೆನ್ಸಿಯನ್ನು ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕ್ರಿಪ್ಟೊ ವ್ಯವಹಾರದ ಬದಲಾಗಿ ಆರೋಪಿಗಳು ರೂಪಾಯಿ ರೂಪದಲ್ಲಿ ಹಣವನ್ನು ವಾಪಸ್ ಪಡೆಯುತ್ತಿದ್ದರು. ಇದಕ್ಕಾಗಿ ಮಂಗಳೂರು ನಗರದ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸುತ್ತಿದ್ದರು.
ಸುಮಾರು 70ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ ಚೀನಾದವರಿಗೆ ನೀಡಲಾಗಿತ್ತು. ನಂತರ ಚೀನಾದ ಸೈಬರ್ ವಂಚಕರು ಆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು. ಆದರೆ ಆ ಹಣ ಸೈಬರ್ ವಂಚನೆಯ ಮೂಲಕ ಪಡೆದದ್ದಾಗಿತ್ತು ಎಂದು ತಿಳಿದುಬಂದಿದೆ. ಚೀನಾದವರ ಸೈಬರ್ ವಂಚನೆ ಬಗ್ಗೆ ಆರೋಪಿಗಳಿಗೆ ತಿಳಿದಿದ್ದರೂ ಸಹ, ಹಣದ ಆಸೆಗೆ ಅವರು ಅವರಿಗೆ ಸಾಥ್ ನೀಡಿದ್ದಾರೆ. ಪ್ರಕರಣದಲ್ಲಿ ಬಳಸಲಾಗಿದ್ದ 37 ಬ್ಯಾಂಕ್ ಖಾತೆಗಳ ವಿರುದ್ಧ ದೇಶದಾದ್ಯಂತ 88ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm