ಬ್ರೇಕಿಂಗ್ ನ್ಯೂಸ್
14-03-26 05:19 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 14 :ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ, ನಲಿಕೆಯವರು ಇತ್ಯಾದಿ 16 ಜಾತಿಗಳವರು ಮಾಡಬೇಕೇ ವಿನಾ ಬೇರೆ ಜಾತಿಯವರು ಮಾಡುವಂತಿಲ್ಲ. ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಿಸಿದ್ದಾರೆ. ಇದನ್ನು ದೈವ ನರ್ತನ ಸೇವೆ ಮಾಡುವ ಪಂಗಡದವರು ವಿರೋಧಿಸಬೇಕು ಎಂದು ಪಂಬದ ಜನಾಂಗಕ್ಕೆ ಸೇರಿದ ಡಾ.ರತಿ ಹೇಳಿದ್ದಾರೆ.
ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಬೋಳೂರಿನ ಜಾರಂದಾಯ ದೈವಸ್ಥಾನದಲ್ಲಿ ಹಿಂದೆ ಸುಬ್ಬಣ್ಣ ಪಂಬದ, ಆನಂತರ ಭಾಸ್ಕರ ಪಂಬದ ಪದವಿನಂಗಡಿ, ಮೂಲ್ಕಿಯ ಕುಮಾರ ಪಂಬದರು ದೈವ ನರ್ತನ ಸೇವೆ ಮಾಡುತ್ತಿದ್ದರು. 2026ರ ಈ ಬಾರಿಯ ದೈವದ ಸೇವೆಗೆ ಆಡಳಿತ ಕಮಿಟಿಯು ಕಾಸರಗೋಡು ಜಿಲ್ಲೆಯ ಚಿಪ್ಪಾರಿನ ಗಣೇಶ ಪಂಬದರಿಗೆ ವಹಿಸಿತ್ತು. ಆದರೆ ಗಣೇಶ್ ಪಂಬದ ಮತ್ತು ಆತನ ಪರಿಚಾರಕರು ಕಡಿಮೆ ಸಂಬಳಕ್ಕೆ ಸಿಗುತ್ತಾನೆಂದು ಪದವಿನಂಗಡಿಯ ದಿವಂಗತ ಗಣೇಶ್ ಪಂಬದರ ಕ್ರಿಶ್ಚಿಯನ್ ಪತ್ನಿಯ ಪುತ್ರನನ್ನು ನೇಮ ಕಟ್ಟಲು ಬಳಸಿದ್ದಾರೆ. ಇದು ಪಂಬದ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಹೇಳಿದ್ದಾರೆ.
ಗಣೇಶ ಪಂಬದರಿಗೆ ಎರಡು ಮದುವೆಯಾಗಿದ್ದು, ಮೊದಲಿಗೆ ಕ್ರಿಶ್ಚಿಯನ್ ಪತ್ನಿಯನ್ನು ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದರು. ಬಳಿಕ ಆಕೆಯನ್ನು ತ್ಯಜಿಸಿ ವಿಶ್ವಕರ್ಮ ಸಮುದಾಯದ ಮಹಿಳೆಯನ್ನು ಮದುವೆಯಾಗಿ ಮೂರು ಮಕ್ಕಳನ್ನು ಹೊಂದಿದ್ದರು. ಕೆಲವು ವರ್ಷಗಳ ಹಿಂದೆ ಅವರು ಮೃತಪಟ್ಟಿದ್ದು, ಇದೀಗ ಆತನ ಮಗನಿಂದ ನೇಮ ಕಟ್ಟಿಸಿದ್ದಾರೆ. ಹೀಗಾದರೆ ಮುಂದೆ ಬೇರೆ ಜಾತಿಯವರು, ಕ್ರಿಶ್ಚಿಯನ್ ಧರ್ಮದವರೂ ನೇಮ, ಕೋಲ ಕಟ್ಟುವುದನ್ನು ಮಾಡಿದರೆ ಒಪ್ಪಲು ಆಗುತ್ತದೆಯೇ.. ಇದರಿಂದ ಪಂಬದ ಜನಾಂಗದ ವೃತ್ತಿ ಗೌರವ ಉಳಿಯುತ್ತದೆಯೇ ಎಂದು ಪ್ರಶ್ನಿಸಿದರು.
ಬೋಳೂರಿನ ಜಾರಂದಾಯ ಸ್ಥಾನದ ಕಮಿಟಿಯವರಿಗೆ ಹೇಳಿದ್ದಕ್ಕೆ, ಅಲ್ಲಿನ ಅಜಲು ಹೋಯಿತೆಂಬ ನೆಪದಲ್ಲಿ ನನ್ನ ಬಗ್ಗೆ ಗಣೇಶ ಪಂಬದನ ಕಡೆಯವರು ನಿಂದಿಸಿದ್ದಾರೆ. ನಿನಗೆ ಅರದಲ ಹಾಕಿ ನೇಮ ಕಟ್ಟಲು ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಇದರ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ನೀಡಿದ್ದೇನೆ.
ಈ ಬಗ್ಗೆ ದೈವ ನರ್ತಕರ ಸಂಘಕ್ಕೆ ಮತ್ತು ಪ್ರಮುಖ ಗುತ್ತಿನವರಿಗೆ ತಿಳಿಸಿದ್ದು, ಈ ರೀತಿ ಮಾಡಿರುವುದು ತಪ್ಪೆಂದು ಹೇಳಿದರೂ, ಬಳಿಕ ನನ್ನದೇ ಬಾಯಿ ಮುಚ್ಚಿಸಲು ನೋಡಿದ್ದಾರೆ. ಬೋಳೂರಿನ ಜಾರಂದಾಯ ದೈವಸ್ಥಾನದ ಕಮಿಟಿಯವರು ಮುಂದಿನ ಬಾರಿ ಚಿಪ್ಪಾರಿನ ಗಣೇಶ ಪಂಬದರಿಗೆ ಸೇವೆ ನೀಡುವುದಿಲ್ಲ ಎಂದಿದ್ದಾರೆ. ದೈವಾರಾಧನೆಗೆ ಅಪಚಾರ ಮಾಡಿರುವ ಗಣೇಶ ಪಂಬದರ ಕೆಲಸವನ್ನು ನಮ್ಮ ಜನಾಂಗದವರು ಖಂಡಿಸಬೇಕು ಎಂದು ಡಾ.ರತಿ ಹೇಳಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm