ಬ್ರೇಕಿಂಗ್ ನ್ಯೂಸ್
17-03-26 01:40 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರಿದ್ ಮತ್ತು ಶೇಹರಾಜ್ ಅಲಿಯಾಸ್ ಶಾರೂಕ್ ಎಂಬವರು ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ.
ಮಾರ್ಚ್ 13ರ ರಾತ್ರಿ ಸುಮಾರು 8 ಗಂಟೆಗೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಕರ್ತವ್ಯದಲ್ಲಿದ್ದಾಗ, ವಿಚಾರಣಾಧೀನ ಕೈದಿ ಮೊಹಮ್ಮದ್ ಇಕ್ಬಾಲ್ ಅಧೀಕ್ಷಕರ ಕಚೇರಿಗೆ ನುಗ್ಗಿ ರಂಪಾಟ ಮಾಡಿದ್ದಾನೆ. ಹೊಸದಾಗಿ ಬರುವ ಕೈದಿಗಳನ್ನು ತನ್ನ ಸೂಚನೆಯಂತೆ ತನ್ನ ಕೊಠಡಿಗೇ ಸೇರಿಸಬೇಕು ಎಂದು ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಜೈಲು ಅಧೀಕ್ಷಕರಿಗೆ “ನೀನೇ ನನ್ನ ಟಾರ್ಗೆಟ್” ಎಂದು ಕೊಲೆ ಬೆದರಿಕೆ ಹಾಕಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಇದೇ ವೇಳೆ, ಈತನಿಗೆ ಸಾಥ್ ನೀಡಿದ ಮತ್ತೊಬ್ಬ ಕೈದಿ ಮೊಹಮ್ಮದ್ ಆಫ್ರೀದ್ ಪ್ಲಾಸ್ಟಿಕ್ ಕುರ್ಚಿಯಿಂದ ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಇಬ್ಬರು ಕೈದಿಗಳು ಸೇರಿ ಜೈಲಿನಲ್ಲಿದ್ದ R.O. ವಾಟರ್ ಫಿಲ್ಟರ್ ಮೆಷಿನ್ ಮತ್ತು ಪೈಪ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದರ ಅಂದಾಜು ಮೌಲ್ಯ ₹12,000 ಎಂದು ಹೇಳಲಾಗಿದೆ.
ಇದೇ ಸಮಯದಲ್ಲಿ ಶೇಹರಾಜ್ ಅಲಿಯಾಸ್ ಶಾರೂಕ್ ಎಂಬ ಕೈದಿ ಕೊಠಡಿಯ ಒಳಗಿನಿಂದಲೇ ಹಾಸಿಗೆ-ಹೊದಿಕೆಗಳಿಗೆ ಬೆಂಕಿ ಹಚ್ಚಿ, ಕ್ಯಾರಂ ಬೋರ್ಡ್ಗಳನ್ನು ಮುರಿದು ಹಲ್ಲೆ ಮಾಡಲು ಪ್ರಚೋದಿಸಿದ್ದಾನೆ. ಅಧೀಕ್ಷಕ ಶರಣಬಸಪ್ಪ ಅವರು ನೀಡಿದ ದೂರಿನ ಮೇರೆಗೆ ಮೂವರು ಕೈದಿಗಳ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಮತ್ತು ಸರ್ಕಾರಿ ಸ್ವತ್ತು ನಾಶಪಡಿಸಿದ ಆರೋಪದಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am