ಬ್ರೇಕಿಂಗ್ ನ್ಯೂಸ್
17-03-26 01:40 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರಿದ್ ಮತ್ತು ಶೇಹರಾಜ್ ಅಲಿಯಾಸ್ ಶಾರೂಕ್ ಎಂಬವರು ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ.
ಮಾರ್ಚ್ 13ರ ರಾತ್ರಿ ಸುಮಾರು 8 ಗಂಟೆಗೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಕರ್ತವ್ಯದಲ್ಲಿದ್ದಾಗ, ವಿಚಾರಣಾಧೀನ ಕೈದಿ ಮೊಹಮ್ಮದ್ ಇಕ್ಬಾಲ್ ಅಧೀಕ್ಷಕರ ಕಚೇರಿಗೆ ನುಗ್ಗಿ ರಂಪಾಟ ಮಾಡಿದ್ದಾನೆ. ಹೊಸದಾಗಿ ಬರುವ ಕೈದಿಗಳನ್ನು ತನ್ನ ಸೂಚನೆಯಂತೆ ತನ್ನ ಕೊಠಡಿಗೇ ಸೇರಿಸಬೇಕು ಎಂದು ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಜೈಲು ಅಧೀಕ್ಷಕರಿಗೆ “ನೀನೇ ನನ್ನ ಟಾರ್ಗೆಟ್” ಎಂದು ಕೊಲೆ ಬೆದರಿಕೆ ಹಾಕಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಇದೇ ವೇಳೆ, ಈತನಿಗೆ ಸಾಥ್ ನೀಡಿದ ಮತ್ತೊಬ್ಬ ಕೈದಿ ಮೊಹಮ್ಮದ್ ಆಫ್ರೀದ್ ಪ್ಲಾಸ್ಟಿಕ್ ಕುರ್ಚಿಯಿಂದ ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಇಬ್ಬರು ಕೈದಿಗಳು ಸೇರಿ ಜೈಲಿನಲ್ಲಿದ್ದ R.O. ವಾಟರ್ ಫಿಲ್ಟರ್ ಮೆಷಿನ್ ಮತ್ತು ಪೈಪ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದರ ಅಂದಾಜು ಮೌಲ್ಯ ₹12,000 ಎಂದು ಹೇಳಲಾಗಿದೆ.
ಇದೇ ಸಮಯದಲ್ಲಿ ಶೇಹರಾಜ್ ಅಲಿಯಾಸ್ ಶಾರೂಕ್ ಎಂಬ ಕೈದಿ ಕೊಠಡಿಯ ಒಳಗಿನಿಂದಲೇ ಹಾಸಿಗೆ-ಹೊದಿಕೆಗಳಿಗೆ ಬೆಂಕಿ ಹಚ್ಚಿ, ಕ್ಯಾರಂ ಬೋರ್ಡ್ಗಳನ್ನು ಮುರಿದು ಹಲ್ಲೆ ಮಾಡಲು ಪ್ರಚೋದಿಸಿದ್ದಾನೆ. ಅಧೀಕ್ಷಕ ಶರಣಬಸಪ್ಪ ಅವರು ನೀಡಿದ ದೂರಿನ ಮೇರೆಗೆ ಮೂವರು ಕೈದಿಗಳ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಮತ್ತು ಸರ್ಕಾರಿ ಸ್ವತ್ತು ನಾಶಪಡಿಸಿದ ಆರೋಪದಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm