ಬ್ರೇಕಿಂಗ್ ನ್ಯೂಸ್
17-03-26 07:16 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಆರೋಪ ಪ್ರಕರಣದ ಬಗ್ಗೆ ಪ್ರಾಥಮಿಕ ವರದಿ ಪಡೆದ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಇಲಾಖಾ ತನಿಖೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಇನ್ಸ್ ಪೆಕ್ಟರ್ ಬಗ್ಗೆ ಆರೋಪ ಮಾಡಿರುವ ಸುಮತಿ ನಾಯ್ಕ್ ಮತ್ತು ಅವರ ಅಕ್ಕನ ವಿಚಾರದಲ್ಲಿ ಕೌಟುಂಬಿಕ ಕಲಹದ ಬಗ್ಗೆ ಪ್ರತ್ಯೇಕ ನಾಲ್ಕು ಕೇಸು ದಾಖಲಾಗಿದೆ. ಈ ಪೈಕಿ ಒಂದು ಕೇಸು ತನಿಖಾ ಹಂತದಲ್ಲಿದ್ದು ಇತರ ಮೂರು ಕೇಸುಗಳು ಹೈಕೋರ್ಟ್ ನಲ್ಲಿ ಸ್ಟೇಯಾಗಿದೆ. ಅವಿತಾ ಮಿನೇಜಸ್ ಎಂಬ ಮತ್ತೊಬ್ಬ ಮಹಿಳೆ ಮಾಧ್ಯಮಕ್ಕೆ ಆರೋಪ ಮಾಡಿದ್ದು ಆಕೆಯ ಗಂಡನ ಬಗ್ಗೆ ನಾಲ್ಕು ಕೇಸು ಮೂಡುಬಿದ್ರೆಯಲ್ಲಿ ದಾಖಲಾಗಿದೆ. ಒಂದರಲ್ಲಿ ಬಡ ಕುಟುಂಬದ ಕಿಡ್ನಿ ಚಿಕಿತ್ಸೆಗೆಂದು ಹಣ ಸಂಗ್ರಹಿಸಿದ ವಿಚಾರದಲ್ಲಿ ದಂಪತಿ ವಿರುದ್ಧ ಕೇಸು ದಾಖಲಾಗಿದ್ದು ಇನ್ಸ್ ಪೆಕ್ಟರ್ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವೇಳೆ, ಆಕೆಗೆ ಇನ್ಸ್ ಪೆಕ್ಟರ್ ಕಿರುಕುಳ ನೀಡಿದ್ದಾರೆಂಬ ವಿಚಾರದಲ್ಲಿ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ಜೊತೆಗಿದ್ದ ಇಬ್ಬರು ಮೀಡಿಯಾದವರು ಮತ್ತು ಒಬ್ಬರು ವಕೀಲರನ್ನು ಪ್ರಶ್ನಿಸಿದ್ದು ಹಣ ಕೇಳಿರುವುದು ಮತ್ತು ಲೈಂಗಿಕ ಕಿರುಕುಳದ ಆರೋಪವನ್ನು ನಿರಾಕರಿಸಿದ್ದಾರೆ.
ಇವರಿಬ್ಬರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರೆ, ಆಡಿಯೋದಲ್ಲಿ ಮಾತನಾಡಿದ್ದು ಮತ್ತು ವಿಡಿಯೋದಲ್ಲಿ ಕಾಣಿಸಿಕೊಂಡವರು ಬೇರೆಯೇ ಆಗಿದ್ದಾರೆ. ಆದರೆ ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ಮಾತು, ವರ್ತನೆ ಪ್ರಶ್ನಾರ್ಹವಾಗಿದ್ದು ಬೇಜವಾಬ್ದಾರಿಯಿಂದ ಮಾತನಾಡಿದ್ದು ಕಂಡುಬಂದಿದೆ. ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಮಹಿಳೆಯರು ಘಟನೆ ಬಗ್ಗೆ ತನಿಖೆಗೆ ಪೊಲೀಸ್ ದೂರು ಕೊಡಲು ನಿರಾಕರಿಸಿದ್ದಾರೆ. ಆದರೆ ಇನ್ಸ್ ಪೆಕ್ಟರ್ ಆಗಿದ್ದುಕೊಂಡು ಮಹಿಳೆಯರ ಜೊತೆಗೆ ದುರ್ನಡತೆ ತೋರಿದ್ದಕ್ಕಾಗಿ ಸಂದೇಶ್ ಅವರನ್ನು ಕರ್ತವ್ಯದಿಂದ ಅಮಾನತು ಪಡಿಸಿದ್ದು ಸಮಗ್ರ ತನಿಖೆ ನಡೆಸಲು ಎಸಿಪಿಗೆ ಹೊಣೆ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Moodbidri Police Inspector Sandesh has been suspended from duty pending a departmental inquiry, following allegations of misconduct involving women. The action was taken by Mangaluru Police Commissioner Sudheer Reddy after reviewing a preliminary report on the matter.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm