ಬ್ರೇಕಿಂಗ್ ನ್ಯೂಸ್
17-03-26 07:16 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಆರೋಪ ಪ್ರಕರಣದ ಬಗ್ಗೆ ಪ್ರಾಥಮಿಕ ವರದಿ ಪಡೆದ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಇಲಾಖಾ ತನಿಖೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಇನ್ಸ್ ಪೆಕ್ಟರ್ ಬಗ್ಗೆ ಆರೋಪ ಮಾಡಿರುವ ಸುಮತಿ ನಾಯ್ಕ್ ಮತ್ತು ಅವರ ಅಕ್ಕನ ವಿಚಾರದಲ್ಲಿ ಕೌಟುಂಬಿಕ ಕಲಹದ ಬಗ್ಗೆ ಪ್ರತ್ಯೇಕ ನಾಲ್ಕು ಕೇಸು ದಾಖಲಾಗಿದೆ. ಈ ಪೈಕಿ ಒಂದು ಕೇಸು ತನಿಖಾ ಹಂತದಲ್ಲಿದ್ದು ಇತರ ಮೂರು ಕೇಸುಗಳು ಹೈಕೋರ್ಟ್ ನಲ್ಲಿ ಸ್ಟೇಯಾಗಿದೆ. ಅವಿತಾ ಮಿನೇಜಸ್ ಎಂಬ ಮತ್ತೊಬ್ಬ ಮಹಿಳೆ ಮಾಧ್ಯಮಕ್ಕೆ ಆರೋಪ ಮಾಡಿದ್ದು ಆಕೆಯ ಗಂಡನ ಬಗ್ಗೆ ನಾಲ್ಕು ಕೇಸು ಮೂಡುಬಿದ್ರೆಯಲ್ಲಿ ದಾಖಲಾಗಿದೆ. ಒಂದರಲ್ಲಿ ಬಡ ಕುಟುಂಬದ ಕಿಡ್ನಿ ಚಿಕಿತ್ಸೆಗೆಂದು ಹಣ ಸಂಗ್ರಹಿಸಿದ ವಿಚಾರದಲ್ಲಿ ದಂಪತಿ ವಿರುದ್ಧ ಕೇಸು ದಾಖಲಾಗಿದ್ದು ಇನ್ಸ್ ಪೆಕ್ಟರ್ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವೇಳೆ, ಆಕೆಗೆ ಇನ್ಸ್ ಪೆಕ್ಟರ್ ಕಿರುಕುಳ ನೀಡಿದ್ದಾರೆಂಬ ವಿಚಾರದಲ್ಲಿ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ಜೊತೆಗಿದ್ದ ಇಬ್ಬರು ಮೀಡಿಯಾದವರು ಮತ್ತು ಒಬ್ಬರು ವಕೀಲರನ್ನು ಪ್ರಶ್ನಿಸಿದ್ದು ಹಣ ಕೇಳಿರುವುದು ಮತ್ತು ಲೈಂಗಿಕ ಕಿರುಕುಳದ ಆರೋಪವನ್ನು ನಿರಾಕರಿಸಿದ್ದಾರೆ.
ಇವರಿಬ್ಬರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರೆ, ಆಡಿಯೋದಲ್ಲಿ ಮಾತನಾಡಿದ್ದು ಮತ್ತು ವಿಡಿಯೋದಲ್ಲಿ ಕಾಣಿಸಿಕೊಂಡವರು ಬೇರೆಯೇ ಆಗಿದ್ದಾರೆ. ಆದರೆ ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ಮಾತು, ವರ್ತನೆ ಪ್ರಶ್ನಾರ್ಹವಾಗಿದ್ದು ಬೇಜವಾಬ್ದಾರಿಯಿಂದ ಮಾತನಾಡಿದ್ದು ಕಂಡುಬಂದಿದೆ. ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಮಹಿಳೆಯರು ಘಟನೆ ಬಗ್ಗೆ ತನಿಖೆಗೆ ಪೊಲೀಸ್ ದೂರು ಕೊಡಲು ನಿರಾಕರಿಸಿದ್ದಾರೆ. ಆದರೆ ಇನ್ಸ್ ಪೆಕ್ಟರ್ ಆಗಿದ್ದುಕೊಂಡು ಮಹಿಳೆಯರ ಜೊತೆಗೆ ದುರ್ನಡತೆ ತೋರಿದ್ದಕ್ಕಾಗಿ ಸಂದೇಶ್ ಅವರನ್ನು ಕರ್ತವ್ಯದಿಂದ ಅಮಾನತು ಪಡಿಸಿದ್ದು ಸಮಗ್ರ ತನಿಖೆ ನಡೆಸಲು ಎಸಿಪಿಗೆ ಹೊಣೆ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Moodbidri Police Inspector Sandesh has been suspended from duty pending a departmental inquiry, following allegations of misconduct involving women. The action was taken by Mangaluru Police Commissioner Sudheer Reddy after reviewing a preliminary report on the matter.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am