ಬ್ರೇಕಿಂಗ್ ನ್ಯೂಸ್
17-03-26 07:35 pm HK News Staffer ಕರಾವಳಿ
ಉಡುಪಿ, ಮಾ.17: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರ ವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ 'ಸಮಾಧಾನ ಮಹೋತ್ಸವ' ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ ಸಮಾಧಾನದ ಹೆಸರಿನಲ್ಲಿ ನಡೆಯುತ್ತಿರುವ ಮತಾಂತರದ ಷಡ್ಯಂತ್ರವಾಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದಕ್ಕೆ ಕೂಡಲೇ ತಡೆ ನೀಡಬೇಕೆಂದು ಜಾಗರಣ ವೇದಿಕೆ ಒತ್ತಾಯಿಸುತ್ತದೆ ಎಂದರು.
ತಮಿಳುನಾಡಿನಲ್ಲಿ ಲಾಝರಸ್ ಅವರ ವಿರುದ್ಧ ಸಾಕಷ್ಟು ಕ್ರಿಮಿನಲ್ ಕೇಸುಗಳಿದ್ದು ಹಲವು ಗಂಭೀರ ಆರೋಪಗಳೂ ಇವೆ ಎಂದ ಶ್ರೀಕಾಂತ್ ಶೆಟ್ಟಿ, ಹಿಂದು ವಿರೋಧಿ ಭಾಷಣ, ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಕುರಿತಂತೆ ತಮಿಳುನಾಡಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿವೆ ಎಂದರು.

ಉಡುಪಿಯಂಥ ಶಾಂತ ನಗರದಲ್ಲಿ ಧಾರ್ಮಿಕ ಅಶಾಂತಿ ಮೂಡಿಸುವ ವಿವಾದಾತ್ಮಕ ವ್ಯಕ್ತಿಗಳ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಮನವಿ ಮಾಡಿದ ಅವರು, ಒಂದು ವೇಳೆ ಅನುಮತಿ ನೀಡಿದಲ್ಲಿ ವೇದಿಕೆಯಿಂದ ಜಿಲ್ಲೆಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಿಂಜಾವೇಯ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ, ಜಿಲ್ಲಾ ಪ್ರಮುಖರಾದ ರತ್ನಾಕರ ಅಮೀನ್, ಗುರುಪ್ರಸಾದ್ ನಾರಾವಿ, ವಿಜಯಕೊಡವೂರು ಉಪಸ್ಥಿತರಿದ್ದರು.
A controversy has erupted in Udupi over the proposed “Samadhana Mahotsava” program scheduled from March 20 to 22 at the Mission Compound, to be led by controversial Tamil Nadu-based missionary Mohan C. Lazarus.Hindu Jagarana Vedike leader Srikanth Shetty has strongly opposed the event, stating that it will not be allowed to take place. Addressing a press conference in Udupi, he alleged that the program is a “conversion conspiracy” being carried out under the guise of promoting peace.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am