ಬ್ರೇಕಿಂಗ್ ನ್ಯೂಸ್
17-03-26 10:54 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಭೂ ವ್ಯವಹಾರದಲ್ಲಿನ ವೈಷಮ್ಯದಿಂದ ವ್ಯಕ್ತಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ತನ್ನ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿ ಕೊಲೆಗೆ ಯತ್ನಿಸಿದ ಘಟನೆ ನಗರದ ಆರ್ಯ ಸಮಾಜ ರಸ್ತೆಯಲ್ಲಿ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ (26) ಎಂಬಾತ ಬಂಧಿತ. ಮಲ್ಲಿಕಟ್ಟೆ ನಿವಾಸಿ ಮೋಹನದಾಸ್ ಶೆಟ್ಟಿ (56) ಅವರಿಗೆ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಮ್ಮದ್ ಶರೀಫ್ ಮತ್ತು ಆತನ ತಂದೆ ಮಹಮ್ಮದ್ ಇಕ್ಬಾಲ್ ಎಂಬವರ ಜೊತೆಗೆ ಮೋಹನದಾಸ್ ಶೆಟ್ಟಿಗೆ ಭೂ ವ್ಯವಹಾರವಿದ್ದು, ಸುರತ್ಕಲ್ ನ ಕಾನ ಮತ್ತು ವಾವಂಜೂರಿನಲ್ಲಿ ಸುಮಾರು ಎರಡು ಕೋಟಿ ಮೌಲ್ಯದ ಜಾಗವನ್ನು ಖರೀದಿಸಲು ಹೂಡಿಕೆ ಮಾಡಿದ್ದರು. ವ್ಯವಹಾರದಲ್ಲಿ ಮೋಹನದಾಸ್ ಶೆಟ್ಟಿ ಮೋಸ ಮಾಡಿದ ಸಿಟ್ಟಿನಿಂದ ಇಂದು ಬೆಳಗ್ಗೆ 11 ಗಂಟೆಗೆ ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ, ಮೋಹನದಾಸ ಶೆಟ್ಟಿಯವರ ಮೊಬೈಲ್ ಕಸಿದಿದ್ದು ನಂತರ ತನ್ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿರುವಾಗ ಆರೋಪಿ ವ್ಯಕ್ತಿ ಸಿಟ್ಟಿನಿಂದ ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿ ವೇಗವಾಗ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಗುದ್ದಿ ಕೊಲೆಗೆ ಪ್ರಯತ್ನಿಸಿದ್ದಾನೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಕೃತ್ಯವೆಸಗಿದ ಆರೋಪಿ ಮಹಮ್ಮದ್ ಶರೀಫ್ ಎಂಬಾತನನ್ನು ಪತ್ತೆಮಾಡಿ ದಸ್ತಗಿರಿ ಮಾಡಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm