ಬ್ರೇಕಿಂಗ್ ನ್ಯೂಸ್
17-03-26 10:54 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ಭೂ ವ್ಯವಹಾರದಲ್ಲಿನ ವೈಷಮ್ಯದಿಂದ ವ್ಯಕ್ತಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ತನ್ನ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿ ಕೊಲೆಗೆ ಯತ್ನಿಸಿದ ಘಟನೆ ನಗರದ ಆರ್ಯ ಸಮಾಜ ರಸ್ತೆಯಲ್ಲಿ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ (26) ಎಂಬಾತ ಬಂಧಿತ. ಮಲ್ಲಿಕಟ್ಟೆ ನಿವಾಸಿ ಮೋಹನದಾಸ್ ಶೆಟ್ಟಿ (56) ಅವರಿಗೆ ಇನ್ನೋವಾ ಕಾರಿನಲ್ಲಿ ಡಿಕ್ಕಿಪಡಿಸಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಮ್ಮದ್ ಶರೀಫ್ ಮತ್ತು ಆತನ ತಂದೆ ಮಹಮ್ಮದ್ ಇಕ್ಬಾಲ್ ಎಂಬವರ ಜೊತೆಗೆ ಮೋಹನದಾಸ್ ಶೆಟ್ಟಿಗೆ ಭೂ ವ್ಯವಹಾರವಿದ್ದು, ಸುರತ್ಕಲ್ ನ ಕಾನ ಮತ್ತು ವಾವಂಜೂರಿನಲ್ಲಿ ಸುಮಾರು ಎರಡು ಕೋಟಿ ಮೌಲ್ಯದ ಜಾಗವನ್ನು ಖರೀದಿಸಲು ಹೂಡಿಕೆ ಮಾಡಿದ್ದರು. ವ್ಯವಹಾರದಲ್ಲಿ ಮೋಹನದಾಸ್ ಶೆಟ್ಟಿ ಮೋಸ ಮಾಡಿದ ಸಿಟ್ಟಿನಿಂದ ಇಂದು ಬೆಳಗ್ಗೆ 11 ಗಂಟೆಗೆ ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ, ಮೋಹನದಾಸ ಶೆಟ್ಟಿಯವರ ಮೊಬೈಲ್ ಕಸಿದಿದ್ದು ನಂತರ ತನ್ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿರುವಾಗ ಆರೋಪಿ ವ್ಯಕ್ತಿ ಸಿಟ್ಟಿನಿಂದ ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿ ವೇಗವಾಗ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಗುದ್ದಿ ಕೊಲೆಗೆ ಪ್ರಯತ್ನಿಸಿದ್ದಾನೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ತನಿಖೆ ಕೈಗೊಂಡ ಪೊಲೀಸರು ಕೃತ್ಯವೆಸಗಿದ ಆರೋಪಿ ಮಹಮ್ಮದ್ ಶರೀಫ್ ಎಂಬಾತನನ್ನು ಪತ್ತೆಮಾಡಿ ದಸ್ತಗಿರಿ ಮಾಡಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am