ಬ್ರೇಕಿಂಗ್ ನ್ಯೂಸ್
18-03-26 09:41 am HK News Staffer ಕರಾವಳಿ
ಮಂಗಳೂರು, ಮಾರ್ಚ್ 18: ನಗರದ ಎಸ್ಸಿಎಸ್ ಆಸ್ಪತ್ರೆ ಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಮಗುವಿನ ತಲೆಯ ಮೇಲೆ ಗಾಯ ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯ ಆರೋಪ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕೋಡಿಕಲ್ ನಿವಾಸಿ ಅನಿಲ್ ಅವರ ಪತ್ನಿ ಪ್ರತೀಕ್ಷಾ ಅವರನ್ನು ಸೋಮವಾರ ಮಧ್ಯಾಹ್ನ ಹೆರಿಗೆಗಾಗಿ ಎಸ್ಸಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ 2 ಗಂಟೆ ಸುಮಾರಿಗೆ ಮಗುವಿಗೆ ಜನ್ಮ ನೀಡಿದ್ದಾರೆ. ಆರಂಭದಲ್ಲಿ ಹೆರಿಗೆ ಸುಗಮವಾಗಿ ನಡೆದಿದ್ದು, ಮಗು ಆರೋಗ್ಯವಾಗಿಯೇ ಇದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಆದರೆ ಬಳಿಕ ಮಗುವಿನ ಆರೋಗ್ಯ ಹದಗೆಟ್ಟಿದ್ದಾಗಿ ಹೇಳಿ, ಮರುದಿನ ಬೆಳಿಗ್ಗೆ ಮಗು ಸಾವನ್ನಪ್ಪಿದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಈ ಅಚಾನಕ್ ಬೆಳವಣಿಗೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಮಗುವಿನ ತಲೆಯ ಮೇಲೆ ಗಾಯ ಕಂಡುಬಂದ ಹಿನ್ನೆಲೆಯಲ್ಲಿ, ಹೆರಿಗೆ ವೇಳೆ ಬಳಸಲಾದ ವ್ಯಾಕ್ಯೂಮ್ ಉಪಕರಣದಿಂದ ಹೆಚ್ಚು ಒತ್ತಡ ಬಿದ್ದಿರುವ ಸಾಧ್ಯತೆ ಇದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಸಂಬಂಧಿಸಿದ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.
A tragic incident has been reported at SCS Hospital in the city, where a newborn baby died during delivery under suspicious circumstances. The family has alleged medical negligence after noticing an injury on the baby’s head. Police have registered a case and initiated an investigation.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm