ಬ್ರೇಕಿಂಗ್ ನ್ಯೂಸ್
02-01-21 08:11 pm Mangaluru Correspondent ಕರಾವಳಿ
ಮಂಗಳೂರು, ಜ.2: ಬಿಜೆಪಿ ಪಕ್ಷದ ಬಗ್ಗೆ ಟೀಕಿಸಿ ಬರೆದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಗ್ಯಾಂಗ್ ರೇಪ್ ಮಾಡಬೇಕು ಎಂದು ಫೇಸ್ಬುಕ್ ನಲ್ಲಿ ಕರೆ ಕೊಟ್ಟ ವಿಚಾರದ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿರುವ ಮಂಗಳೂರಿನ ಮಹಿಳೆಯೊಬ್ಬರು, ಫೇಸ್ಬುಕ್ ನಲ್ಲಿ ಬಿಜೆಪಿ ಪಕ್ಷದ ಕುರಿತ ಪರ- ವಿರೋಧ ಚರ್ಚೆಯಲ್ಲಿ ತನ್ನ ಅಭಿಪ್ರಾಯ ಹಾಕಿದ್ದರು. ಎಸ್ ಡಿಪಿಐ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದಿದ್ದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗ ಎಸ್ ಡಿಪಿಐಯನ್ನು ನಿಷೇಧ ಯಾಕೆ ಮಾಡಿಲ್ಲ. ಬಿಜೆಪಿಯವರ ಕುತಂತ್ರಕ್ಕೆ ಎಸ್ ಡಿಪಿಐ ಬೇಕು, ಇದರಿಂದ ಅವರಿಗೆ ಲಾಭ ಇದೆ ಎಂದು ಟೀಕಿಸಿದ್ದರು.


ಚರ್ಚೆಯಲ್ಲಿ ಮಹಿಳೆ ತನ್ನ ಅಭಿಪ್ರಾಯ ಹೇಳಿಕೊಂಡಿದ್ದರು ಅಷ್ಟೇ. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಬಾಬುರಾವ್ ಸರ್ದೇಸಾಯಿ ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ವ್ಯಕ್ತಿ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ಅಲ್ಲದೆ, ಇನ್ನಿತರ ತನ್ನ ಸ್ನೇಹಿತರಿಗೆ ಈಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಬೇಕೆಂದು ಹೇಳಿದ್ದಾನೆ. ಈ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆತನಿಗೆ ಟ್ಯಾಗ್ ಮಾಡಿ ಬರೆದಿದ್ದು ಪ್ರಧಾನಿ ಮೋದಿಯನ್ನು ಅನುಸರಿಸುವ ಮಂದಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದಿದ್ದಾರೆ.
ಬಾಬುರಾವ್ ಸರ್ದೇಸಾಯಿ ಬಿಜೆಪಿ ಕಾರ್ಯಕರ್ತನೇ, ಮೋದಿ ಅಭಿಮಾನಿಯೇ, ತಾನು ಎಲ್ಲಿಯವನು ಎಂಬ ಬಗ್ಗೆ ಪ್ರೊಫೈಲ್ ನಲ್ಲಿ ಹಾಕಿಕೊಂಡಿಲ್ಲ. ಈ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮತ್ತು ಸ್ನೇಹಿತರು ಮಹಿಳೆಯ ಜೊತೆ ಸೇರಿ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Social Activist of Mangalore Threatened of Gang Rape on social media for sharing her political view on BJP party. A case has been filed at the Cybercrime police station.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am