ಬ್ರೇಕಿಂಗ್ ನ್ಯೂಸ್
19-03-26 02:51 pm HK News Staffer ಕರಾವಳಿ
ಉಡುಪಿ, ಮಾರ್ಚ್ 19: ಗಲ್ಫ್ ಯುದ್ದದಿಂದಾಗಿ ಉಂಟಾಗಿರುವ ಎಲ್ ಪಿಜಿ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು ಇದೀಗ ಗ್ಯಾಸ್ ಸಿಲಿಂಡರ್ ಕುರಿತಾಗಿ ಮೆಸೇಜ್ ಗಳನ್ನು ಕಳುಹಿಸಿ ಅಮಾಯಕರನ್ನು ಬಲೆಗೆ ಬೀಳಿಸಲು ಮುಂದಾಗಿದ್ದಾರೆ. ಉಡಪಿಯಲ್ಲಿ ಇತ್ತೀಚೆಗೆ ಇಂತಹ ಎರಡು ಪ್ರಕರಣಗಳು ಬೆಳಕಿಗೆ ಬಂದಿದೆ.
ಕೇವಲ 20 ರೂ. ಗ್ಯಾಸ್ ಬಿಲ್ ಬಾಕಿ ಇದೆ ಎಂದು ನಂಬಿಸಿ, ವೃದ್ಧ ದಂಪತಿಗಳ ಬ್ಯಾಂಕ್ ಖಾತೆಯಿಂದ ಸುಮಾರು ₹9.78 ಲಕ್ಷ ಹಣವನ್ನು ಲೂಟಿ ಮಾಡಿರುವ ಘಟನೆ ಉಡುಪಿ ನಗರದ ಶಿವಳ್ಳಿಯಲ್ಲಿ ನಡೆದಿದೆ. ಶಿವಳ್ಳಿ ನಿವಾಸಿ ರವಿದಾಸ್ ರಾಘವೇಂದ್ರ ನಾಯಕ್ ಅವರಿಗೆ ಮಾರ್ಚ್ 17ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಗ್ಯಾಸ್ ಬಿಲ್ ₹20 ಬಾಕಿ ಇದೆ ಎಂದು ತಿಳಿಸಿದ್ದಾನೆ. ಬಳಿಕ ವಾಟ್ಸಾಪ್ ಮೂಲಕ ‘Mahangar Gas Bill Update.apk’ ಎಂಬ ಲಿಂಕ್ ಕಳುಹಿಸಿ, ಅದನ್ನು ಡೌನ್ಲೋಡ್ ಮಾಡುವಂತೆ ಸೂಚಿಸಿದ್ದಾನೆ. ರವಿದಾಸ್ ಅವರು ಆ ಲಿಂಕ್ ಒತ್ತಿದ ತಕ್ಷಣ ಅವರ ಫೋನ್ ಹ್ಯಾಕ್ ಆಗಿದೆ.
ಬಿಲ್ ಪಾವತಿಯಾಗಿಲ್ಲ ಎಂಬ ನೆಪವೊಡ್ಡಿ ಆರೋಪಿ ದಂಪತಿಗಳ ಬಂಧನ್ ಬ್ಯಾಂಕ್, ಯೆಸ್ ಬ್ಯಾಂಕ್ ಹಾಗೂ ಹೆಚ್ಡಿಎಫ್ಸಿ ಬ್ಯಾಂಕಿನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಿವರಗಳನ್ನು ಪಡೆದಿದ್ದಾನೆ. ಕ್ಷಣಾರ್ಧದಲ್ಲಿ ಮೂರೂ ಬ್ಯಾಂಕ್ ಖಾತೆಗಳಿಂದ ಒಟ್ಟು ₹9,78,036.50/- ಹಣವನ್ನು ವರ್ಗಾಯಿಸಿ ವಂಚಿಸಿದ್ದಾನೆ. ಈ ಕುರಿತು ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಐಟಿ ಆಕ್ಟ್ ಹಾಗೂ ಬಿಎನ್ಎಸ್ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸೈಬರ್ ವಂಚನೆಯ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ತಿಳಿಸಿದ್ದಾರೆ. ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡು ಸೈಬರ್ ವಂಚಕರು ಗ್ಯಾಸ್ ಬುಕ್ಕಿಂಗ್ ಅಥವಾ ಗ್ಯಾಸ್ ಸಿಲಿಂಡರ್ ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಅಪರಿಚಿತರಿಂದ ಬರುವ ಲಿಂಕ್ಗಳು ಅಥವಾ ಎಪಿಕೆ ಫೈಲ್ಗಳನ್ನು ತೆರೆಯದೇ ಜಾಗರೂಕರಾಗಿರಬೇಕು ಎಂದು ತಿಳಿಸಿದ್ದಾರೆ. ಈ ರೀತಿಯ ವಂಚನೆಗೆ ಈಗಾಗಲೇ ಉಡುಪಿ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಸಂದೇಶಗಳು, ಕರೆಗಳು ಅಥವಾ ಲಿಂಕ್ಗಳ ಬಗ್ಗೆ ಎಚ್ಚರಿಕೆ ವಹಿಸಿ, ಅಧಿಕೃತ ಮೂಲಗಳ ಮೂಲಕವೇ ಗ್ಯಾಸ್ ಬುಕ್ಕಿಂಗ್ ಹಾಗೂ ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಎಸ್ಪಿ ಮನವಿ ಮಾಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am