ಬ್ರೇಕಿಂಗ್ ನ್ಯೂಸ್
19-03-26 05:27 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 19 : ಧರ್ಮಸ್ಥಳದಲ್ಲಿ 1990ರಿಂದ 2021ರ ವರೆಗೆ ನಡೆದಿದೆ ಎನ್ನಲಾದ 74 ಅಸಹಜ ಸಾವುಗಳ ಪ್ರಕರಣ ಸಂಬಂಧಿಸಿ ಪೋಸ್ಟ್ ಮಾರ್ಟಂ ವರದಿ ಸೇರಿದಂತೆ ಸಮಗ್ರ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ತಾಯಿ ಕುಸುಮಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಹಳೆ ಪ್ರಕರಣಗಳಲ್ಲಿ ಹೊಸತಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂಬ ದೂರಿಗೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಸ್. ಬಾಲನ್, “74 ಅಸಹಜ ಸಾವುಗಳ ಪ್ರಕರಣಗಳಲ್ಲಿ ಸರಿಯಾದ ಪಂಚನಾಮೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆ ಮಾಡದೇ ಶವ ಸಂಸ್ಕಾರ ಮಾಡಲಾಗಿದೆ. ಲಾಡ್ಜ್ ನಲ್ಲಿ ಸಿಕ್ಕಿದ್ದ ಶವಗಳ ಬಗ್ಗೆ ವಾರೀಸುದಾರರ ತಿಳಿಯುವ ಯತ್ನ ಮಾಡಿಲ್ಲ. ಈ ಎಲ್ಲ ಪ್ರಕರಣಗಳಲ್ಲಿ ಹೊಸದಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಈ ಪ್ರಕರಣಗಳು ಹಳೆಯವು. ಈಗಾಗಲೇ ಯುಡಿಆರ್ ದಾಖಲಾಗಿದೆ. ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದು ತಿಳಿಸಿದರು. ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ಮಹಿಳೆಯರು ನಾಪತ್ತೆಯಾಗಿದ್ದು, ತನಿಖೆ ನಡೆದಿಲ್ಲ ಎಂಬ ವಿಚಾರವನ್ನೂ ಕೋರ್ಟ್ ಗಮನಕ್ಕೆ ತಂದರು. ಶವಗಳ ಸಂಸ್ಕಾರ ಪ್ರಕ್ರಿಯೆಯಲ್ಲೂ ಗಂಭೀರ ಲೋಪಗಳಿರುವುದಾಗಿ ಅರ್ಜಿದಾರ ವಕೀಲರು ಆಕ್ಷೇಪಿಸಿದರು.
ಅನಾಥ ಶವ ಪತ್ತೆಗೆ ಯಾವ ಕ್ರಮ ಕೈಗೊಂಡಿದ್ದೀರಿ, ಎಲ್ಲ ಪ್ರಕರಣಗಳಲ್ಲಿ ಪೋಸ್ಟ್ ಮಾರ್ಟಂ ವರದಿ ಇರಿಸಿದ್ದೀರಾ ಎಂದು ಕೇಳಿದ ನ್ಯಾಯಾಧೀಶರು, ಎಲ್ಲ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm