ಬ್ರೇಕಿಂಗ್ ನ್ಯೂಸ್
19-03-26 05:27 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 19 : ಧರ್ಮಸ್ಥಳದಲ್ಲಿ 1990ರಿಂದ 2021ರ ವರೆಗೆ ನಡೆದಿದೆ ಎನ್ನಲಾದ 74 ಅಸಹಜ ಸಾವುಗಳ ಪ್ರಕರಣ ಸಂಬಂಧಿಸಿ ಪೋಸ್ಟ್ ಮಾರ್ಟಂ ವರದಿ ಸೇರಿದಂತೆ ಸಮಗ್ರ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ತಾಯಿ ಕುಸುಮಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಹಳೆ ಪ್ರಕರಣಗಳಲ್ಲಿ ಹೊಸತಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂಬ ದೂರಿಗೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಸ್. ಬಾಲನ್, “74 ಅಸಹಜ ಸಾವುಗಳ ಪ್ರಕರಣಗಳಲ್ಲಿ ಸರಿಯಾದ ಪಂಚನಾಮೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆ ಮಾಡದೇ ಶವ ಸಂಸ್ಕಾರ ಮಾಡಲಾಗಿದೆ. ಲಾಡ್ಜ್ ನಲ್ಲಿ ಸಿಕ್ಕಿದ್ದ ಶವಗಳ ಬಗ್ಗೆ ವಾರೀಸುದಾರರ ತಿಳಿಯುವ ಯತ್ನ ಮಾಡಿಲ್ಲ. ಈ ಎಲ್ಲ ಪ್ರಕರಣಗಳಲ್ಲಿ ಹೊಸದಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಈ ಪ್ರಕರಣಗಳು ಹಳೆಯವು. ಈಗಾಗಲೇ ಯುಡಿಆರ್ ದಾಖಲಾಗಿದೆ. ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದು ತಿಳಿಸಿದರು. ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ಮಹಿಳೆಯರು ನಾಪತ್ತೆಯಾಗಿದ್ದು, ತನಿಖೆ ನಡೆದಿಲ್ಲ ಎಂಬ ವಿಚಾರವನ್ನೂ ಕೋರ್ಟ್ ಗಮನಕ್ಕೆ ತಂದರು. ಶವಗಳ ಸಂಸ್ಕಾರ ಪ್ರಕ್ರಿಯೆಯಲ್ಲೂ ಗಂಭೀರ ಲೋಪಗಳಿರುವುದಾಗಿ ಅರ್ಜಿದಾರ ವಕೀಲರು ಆಕ್ಷೇಪಿಸಿದರು.
ಅನಾಥ ಶವ ಪತ್ತೆಗೆ ಯಾವ ಕ್ರಮ ಕೈಗೊಂಡಿದ್ದೀರಿ, ಎಲ್ಲ ಪ್ರಕರಣಗಳಲ್ಲಿ ಪೋಸ್ಟ್ ಮಾರ್ಟಂ ವರದಿ ಇರಿಸಿದ್ದೀರಾ ಎಂದು ಕೇಳಿದ ನ್ಯಾಯಾಧೀಶರು, ಎಲ್ಲ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm