ಬ್ರೇಕಿಂಗ್ ನ್ಯೂಸ್
20-03-26 06:56 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 20: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ ದೌರ್ಜನ್ಯದ ಸಾಕ್ಷ್ಯಗಳು ಲಭಿಸಿಲ್ಲ ಎಂದಿದ್ದಾರೆ.
ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ವರ್ತನೆ ಆಕ್ಷೇಪಾರ್ಹ, ದುರ್ನಡತೆಯಿಂದ ಕೂಡಿರುವಂಥದ್ದು. ಅದಕ್ಕೆ ಆತ ಬೆಲೆ ತೆರಬೇಕಾಗುತ್ತದೆ. ಆದರೆ ಈ ಆಡಿಯೋ ಅಥವಾ ವಿಡಿಯೋದಲ್ಲಿರುವವರು ಸುಮತಿ ನಾಯಕ್ ಆಗಲೀ, ಅವಿತಾ ಮಿನೇಜಸ್ ಆಗಲೀ ಅಲ್ಲ. ಯಾರು ಅದರಲ್ಲಿದ್ದಾರೋ ಅವರನ್ನು ತನಿಖೆಗೆ ಒಳಪಡಿಸಿದ್ದು ಅವರು ದೂರು ನೀಡಲು ನಿರಾಕರಿಸಿದ್ದಾರೆ. ಆದರೆ ಈ ಆಡಿಯೋ, ವಿಡಿಯೋಗಳನ್ನು ಮುಂದಿಟ್ಟು ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ದೂರು ನೀಡಿರುವುದು ದುರುದ್ದೇಶದಿಂದ ಕೂಡಿದೆ ಎಂದು ರೆಡ್ಡಿ ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯದ ಆರೋಪಗಳು ಸುಳ್ಳಾದರೂ, ಇನ್ಸ್ ಪೆಕ್ಟರ್ ಆಡಿಯೋ, ವಿಡಿಯೋದಲ್ಲಿ ಅಸಭ್ಯವಾಗಿ ಕಾಣಿಸಿಕೊಂಡಿದ್ದಕ್ಕೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಅದಕ್ಕಾಗಿ ಈಗಾಗಲೇ ಅಮಾನತು ಕ್ರಮ ಜರುಗಿಸಲಾಗಿದೆ. ಕೆಲವು ಎಡವಟ್ಟು, ಹಳೆಯ ತಪ್ಪುಗಳಿಂದಾಗಿ ಅವರ ಮೇಲೆ ಸುಳ್ಳು ಆರೋಪಗಳು ಕೇಳಿಬಂದಿದೆ. ಈ ರೀತಿಯ ತಪ್ಪುಗಳು ಮಾಡಿಲ್ಲದೇ ಇರುತ್ತಿದ್ದರೆ ಇಂತಹ ಆಡಿಯೋ, ವಿಡಿಯೋಗಳು ಮುನ್ನೆಲೆಗೆ ಬರುತ್ತಿರಲಿಲ್ಲ. ಈ ತಪ್ಪುಗಳಿಗಾಗಿ ಬೆಲೆ ತೆರಲೇಬೇಕಾಗುತ್ತದೆ ಎಂದು ಹೇಳಿರುವ ಸುಧೀರ್ ರೆಡ್ಡಿ, ಇಲಾಖೆಯಲ್ಲಿ ಇಂತಹ ದುರ್ನಡತೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಠಾಣೆಗೆ ಬರುವ ಮಹಿಳೆಯರ ಜೊತೆಗೆ ವ್ಯವಹರಿಸುವಾಗ ಜಾಗ್ರತೆ ಇರಬೇಕು ಮತ್ತು ಭವಿಷ್ಯದಲ್ಲಿ ಇಂತಹ ವಿಡಿಯೋಗಳು ಬರದಂತೆ ನೋಡಿಕೊಳ್ಳಬೇಕು ಎಂದು ಕಮಿಷನರ್ ಸಹೋದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Mangaluru Police Commissioner Sudheer Reddy has clarified that the allegations of sexual harassment made against Moodbidri Inspector Sandesh P.G. are false and motivated. According to the Commissioner, a preliminary inquiry conducted under the leadership of an ACP found no evidence to support the claims of sexual harassment. The complaint had been filed with the Women’s Commission by Sumathi Nayak and Avitha Menezes.
08-05-26 12:21 pm
HK News Staffer
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೊಲೀಸ್ ಠಾಣೆಯಲ್ಲೇ ಹೈಡ್ರಾಮಾ ; ಪೋಕ್ಸೋ ಕೇಸ್ ಭಯಕ್ಕ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm