ಬ್ರೇಕಿಂಗ್ ನ್ಯೂಸ್
21-03-26 11:56 am HK News Staffer ಕರಾವಳಿ
ಮಂಗಳೂರು, ಮಾರ್ಚ್ 21: ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ತುರ್ತು ಹಳಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆ, ಕರಾವಳಿ ಭಾಗದ ಪ್ರಮುಖ ಮಾರ್ಗವಾದ ಮಂಗಳೂರು–ಸುಬ್ರಹ್ಮಣ್ಯ ನಡುವೆ ಸಂಚರಿಸುವ ರೈಲು ಸೇವೆಯಲ್ಲಿ ಭಾರೀ ಬದಲಾವಣೆಗಳನ್ನು ಘೋಷಿಸಲಾಗಿದೆ.
ಮಂಗಳೂರು ಸೆಂಟ್ರಲ್–ಸುಬ್ರಹ್ಮಣ್ಯ ರೋಡ್ ನಡುವಿನ ಪ್ಯಾಸೆಂಜರ್ ರೈಲುಗಳು ಒಟ್ಟು 35 ದಿನಗಳ ಕಾಲ ಸಂಪೂರ್ಣ ರದ್ದುಗೊಂಡಿವೆ. ರೈಲು ಸಂಖ್ಯೆ 56629 (ಮಂಗಳೂರು–ಸುಬ್ರಹ್ಮಣ್ಯ ರೋಡ್) ಹಾಗೂ 56630 (ಸುಬ್ರಹ್ಮಣ್ಯ ರೋಡ್–ಮಂಗಳೂರು) ರೈಲುಗಳು ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಮತ್ತು ಜೂನ್ 10ರಿಂದ ಜೂನ್ 21ರವರೆಗೆ ಸಂಚರಿಸುವುದಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.
ಈ ಮಧ್ಯೆ, ಕೆಲವು ಪ್ರಮುಖ ಎಕ್ಸ್ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿಯೂ ವ್ಯತ್ಯಾಸ ಉಂಟಾಗಲಿದೆ. ಯಶವಂತಪುರ–ಕಾರವಾರ (16515), ಯಶವಂತಪುರ–ಮಂಗಳೂರು (16575, 16539) ರೈಲುಗಳು ಸುಮಾರು 20 ನಿಮಿಷಗಳ ವಿಳಂಬದಿಂದ ಸಂಚರಿಸಲಿವೆ. ಮಂಗಳೂರು–ಸುಬ್ರಹ್ಮಣ್ಯ ಪ್ಯಾಸೆಂಜರ್ (56229) ರೈಲು ಏಪ್ರಿಲ್ 21ರಿಂದ ಜೂನ್ 9ರವರೆಗೆ ಸುಮಾರು 55 ನಿಮಿಷ ತಡವಾಗಿ ಓಡಲಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಮನಗಂಡು ಯುಗಾದಿ ಹಾಗೂ ರಂಜಾನ್ ಪ್ರಯುಕ್ತ ಯಶವಂತಪುರ–ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು ಕೂಡ ಓಡಿಸಲಾಗುತ್ತಿದೆ. ಈ ರೈಲು ಮಾರ್ಚ್ 20ರಂದು ಬೆಳಿಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು, ಶನಿವಾರ ಬೆಳಿಗ್ಗೆ 6.45ಕ್ಕೆ ಮಡಗಾಂವ್ ತಲುಪಿದೆ.
ರೈಲು ವಾಪಸ್ಸು ಮಾರ್ಚ್ 22ರಂದು ಬೆಳಿಗ್ಗೆ 11ಕ್ಕೆ ಮಡಗಾಂವ್ನಿಂದ ಹೊರಟು, ಸೋಮವಾರ ಬೆಳಿಗ್ಗೆ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ ವಿಶೇಷ ರೈಲು ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಪುತ್ತೂರು, ಉಡುಪಿ, ಕುಂದಾಪುರ, ಭಟ್ಕಳ, ಕಾರವಾರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ಇದಲ್ಲದೆ, ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿಯೂ ಕಾರ್ಯಾಚರಣಾ ಕಾರಣಗಳಿಂದ ಕರ್ನೂಲ್–ಕಾಚಿಗುಡ, ರಾಯಚೂರು–ಕಾಚಿಗುಡ ಹಾಗೂ ಗದ್ವಾಲ್ ಮಾರ್ಗದ ಹಲವು ರೈಲುಗಳು ಮಾರ್ಚ್ ಮಧ್ಯದಿಂದ ಏಪ್ರಿಲ್ 1ರವರೆಗೆ ರದ್ದುಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಯಾಣಿಕರು ಮುಂಚಿತವಾಗಿ ತಮ್ಮ ಪ್ರಯಾಣ ಯೋಜನೆ ರೂಪಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm