ಬ್ರೇಕಿಂಗ್ ನ್ಯೂಸ್
21-03-26 06:31 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 21: ಯುವಕನೊಬ್ಬ ಪಾನಮತ್ತನಾಗಿ ಬಂದು ಮೆಲ್ಕಾರ್ ಗುಡ್ಡೆಯಂಗಡಿ ಎಂಬಲ್ಲಿರುವ ಪೆಟ್ರೋಲ್ ಪಂಪ್ ನಲ್ಲಿ ದಾಂಧಲೆಗೈದು ಅಲ್ಲಿದ್ದ ಸೊತ್ತುಗಳನ್ನು ಧ್ವಂಸಗೈದ ಘಟನೆ ನಡೆದಿದ್ದು, ಪೊಲೀಸ್ ಒಬ್ಬರ ಎದುರಲ್ಲೇ ಆವಾಜ್ ಹಾಕುತ್ತಾ ಸ್ಥಳದಲ್ಲಿ ಹೈಡ್ರಾಮಾ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಾರ್ಚ್ 20ರಂದು ಸಂಜೆ ಘಟನೆ ನಡೆದಿದ್ದು, ಸಜಪಮೂಡ ಕಾರಾಜೆಯ ಅಫ್ರೀದ್ (28) ಎನ್ನುವ ಯುವಕ ಕುಡಿದು ತೂರಾಡುತ್ತಾ ಗ್ಯಾಸ್ ಹಾಕುತ್ತಿದ್ದ ಸಿಬಂದಿ ಬಳಿಗೆ ಬಂದಿದ್ದಾನೆ. ಅಲ್ಲಿದ್ದ ಸಿಬಂದಿ ಜೊತೆಗೆ ವಾಗ್ವಾದ ನಡೆಸಿ ಒಬ್ಬನಿಗೆ ಹಲ್ಲೆ ನಡೆಸಿದ್ದಾನೆ. ಆನಂತರ, ಗ್ಯಾಸ್ ಪೈಪನ್ನು ಎಳೆದು ಕಾಲಿನಲ್ಲಿ ತುಳಿದು ಅಲ್ಲಿದ್ದ ಇತರೇ ಉಪಕರಣಗಳಿಗೂ ಹಾನಿ ಮಾಡಿದ್ದಲ್ಲದೆ, ಸಿಬಂದಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.



ಬಳಿಕ ಸ್ಥಳಕ್ಕೆ ಬಂದ ಬೀಟ್ ಪೊಲೀಸ್ ಒಬ್ಬರು ರಂಪಾಟ ಮಾಡುತ್ತಿದ್ದ ಯುವಕನನ್ನು ಎತ್ತಿಕೊಂಡು ಹೋಗಲು ಠಾಣೆಯಿಂದ ಪೊಲೀಸ್ ಜೀಪ್ ಬರಲು ಹೇಳಿದ್ದಾರೆ. ಆದರೆ ಅಷ್ಟರಲ್ಲೇ ಪೊಲೀಸರಿಗೂ ಆವಾಜ್ ಹಾಕುತ್ತಾ ಅವರಿಗೂ ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಳಿಕ ಪೊಲೀಸ್ ಜೀಪ್ ಬರುತ್ತಲೇ ಅಲ್ಲಿಂದ ಆತನನ್ನು ಎಳಕೊಂಡು ಜೀಪಿಗೆ ತಳ್ಳಿ ಠಾಣೆಗೆ ಒಯ್ದಿದ್ದಾರೆ.
ಘಟನೆ ಬಗ್ಗೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಆಗಿರುವ ಕುನಾಲ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು, ಆರೋಪಿ ಆಟೋ ಚಾಲಕನ ವಿರುದ್ಧ 115(2), 287, 324(4), 351(2) ಹಾಗೂ 352 ಅಡಿ ಕೇಸು ದಾಖಲಿಸಿದ್ದಾರೆ. ಆರೋಪಿ ಯುವಕ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದರೂ ಅಲ್ಲಿಗೆ ಆಟೋ ತಂದಿರಲಿಲ್ಲ. ಕುಡಿದು ತೂರಾಡುತ್ತಾ ನಡೆದುಕೊಂಡೇ ಬಂದಿದ್ದು ಸ್ಥಳದಲ್ಲಿ ಗಲಾಟೆ ನಡೆಸಿದ್ದಾನೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am