ಬ್ರೇಕಿಂಗ್ ನ್ಯೂಸ್
11-08-20 02:47 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 11: ಪುತ್ತೂರು ನಗರ ಠಾಣಾ ಪೊಲೀಸರು ಬೃಹತ್ ಗಾಂಜಾ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ತರಲಾಗುತ್ತಿದ್ದ 17.5 ಲಕ್ಷ ಮೌಲ್ಯದ 175 ಕೇಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ 19 ಎಎ 9294 ನೋಂದಣಿಯ ಪಿಕ್ ಅಪ್ ವಾಹನ ಮತ್ತು ಕೆಎಲ್ 14 ಎಕ್ಸ್ 9707 ನೋಂದಣಿಯ ಕಾರಿನಲ್ಲಿ 175 ಕೇಜಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಪಿಕ್ ಅಪ್ ವಾಹನದಲ್ಲಿ ಗಾಂಜಾ ಪ್ಯಾಕೆಟ್ ಮೇಲೆ ಹಸಿ ಮೆಕ್ಕೆಜೋಳ ರಾಶಿಯನ್ನು ಹಾಕಲಾಗಿತ್ತು. ಮೇಲ್ಭಾಗದಲ್ಲಿ ಜೋಳದ ಸಾಗಾಟ ನಡೆಸುತ್ತಿರುವ ರೀತಿ ಬಿಂಬಿಸಲಾಗಿತ್ತು. ಪೊಲೀಸರು ತಪಾಸಣೆ ನಡೆಸಿದಾಗ, ಬೃಹತ್ ಗಾಂಜಾ ಸಾಗಾಟ ಜಾಲ ಬಯಲಾಗಿದೆ. ವಾಹನ ಮತ್ತು ಸೊತ್ತುಗಳ ಜೊತೆ ಮೂವರನ್ನು ಬಂಧಿಸಿದ್ದು ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (26) , ಮಂಜೇಶ್ವರದ ಮಜೀರ್ ಪಳ್ಳ ನಿವಾಸಿ ಮೊಹಮ್ಮದ್ ಶಫೀಕ್ (31), ಕನ್ಯಾನ ಗ್ರಾಮದ ನಿವಾಸಿ ಖಲಂದರ್ ಶಾಫಿ(26) ವಿರುದ್ಧ ಎನ್ ಡಿಪಿಎಸ್ ಏಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಇಬ್ರಾಹಿಂ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ, ಖಲಂದರ್ ಶಾಫಿ ವಿರುದ್ಧ 2 ಅಕ್ರಮ ಗಾಂಜಾ ಅಕ್ರಮ ಪ್ರಕರಣ, ಒಂದು ಕೊಲೆ ಯತ್ನ ಪ್ರಕರಣ ಹಾಗೂ ಕಾವೂರು ಠಾಣೆಯಲ್ಲಿ ಒಂದು ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm