ಬ್ರೇಕಿಂಗ್ ನ್ಯೂಸ್
11-08-20 02:47 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 11: ಪುತ್ತೂರು ನಗರ ಠಾಣಾ ಪೊಲೀಸರು ಬೃಹತ್ ಗಾಂಜಾ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ತರಲಾಗುತ್ತಿದ್ದ 17.5 ಲಕ್ಷ ಮೌಲ್ಯದ 175 ಕೇಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ 19 ಎಎ 9294 ನೋಂದಣಿಯ ಪಿಕ್ ಅಪ್ ವಾಹನ ಮತ್ತು ಕೆಎಲ್ 14 ಎಕ್ಸ್ 9707 ನೋಂದಣಿಯ ಕಾರಿನಲ್ಲಿ 175 ಕೇಜಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಪಿಕ್ ಅಪ್ ವಾಹನದಲ್ಲಿ ಗಾಂಜಾ ಪ್ಯಾಕೆಟ್ ಮೇಲೆ ಹಸಿ ಮೆಕ್ಕೆಜೋಳ ರಾಶಿಯನ್ನು ಹಾಕಲಾಗಿತ್ತು. ಮೇಲ್ಭಾಗದಲ್ಲಿ ಜೋಳದ ಸಾಗಾಟ ನಡೆಸುತ್ತಿರುವ ರೀತಿ ಬಿಂಬಿಸಲಾಗಿತ್ತು. ಪೊಲೀಸರು ತಪಾಸಣೆ ನಡೆಸಿದಾಗ, ಬೃಹತ್ ಗಾಂಜಾ ಸಾಗಾಟ ಜಾಲ ಬಯಲಾಗಿದೆ. ವಾಹನ ಮತ್ತು ಸೊತ್ತುಗಳ ಜೊತೆ ಮೂವರನ್ನು ಬಂಧಿಸಿದ್ದು ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (26) , ಮಂಜೇಶ್ವರದ ಮಜೀರ್ ಪಳ್ಳ ನಿವಾಸಿ ಮೊಹಮ್ಮದ್ ಶಫೀಕ್ (31), ಕನ್ಯಾನ ಗ್ರಾಮದ ನಿವಾಸಿ ಖಲಂದರ್ ಶಾಫಿ(26) ವಿರುದ್ಧ ಎನ್ ಡಿಪಿಎಸ್ ಏಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಇಬ್ರಾಹಿಂ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ, ಖಲಂದರ್ ಶಾಫಿ ವಿರುದ್ಧ 2 ಅಕ್ರಮ ಗಾಂಜಾ ಅಕ್ರಮ ಪ್ರಕರಣ, ಒಂದು ಕೊಲೆ ಯತ್ನ ಪ್ರಕರಣ ಹಾಗೂ ಕಾವೂರು ಠಾಣೆಯಲ್ಲಿ ಒಂದು ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm