ಬ್ರೇಕಿಂಗ್ ನ್ಯೂಸ್
11-08-20 02:47 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 11: ಪುತ್ತೂರು ನಗರ ಠಾಣಾ ಪೊಲೀಸರು ಬೃಹತ್ ಗಾಂಜಾ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ತರಲಾಗುತ್ತಿದ್ದ 17.5 ಲಕ್ಷ ಮೌಲ್ಯದ 175 ಕೇಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ 19 ಎಎ 9294 ನೋಂದಣಿಯ ಪಿಕ್ ಅಪ್ ವಾಹನ ಮತ್ತು ಕೆಎಲ್ 14 ಎಕ್ಸ್ 9707 ನೋಂದಣಿಯ ಕಾರಿನಲ್ಲಿ 175 ಕೇಜಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಪಿಕ್ ಅಪ್ ವಾಹನದಲ್ಲಿ ಗಾಂಜಾ ಪ್ಯಾಕೆಟ್ ಮೇಲೆ ಹಸಿ ಮೆಕ್ಕೆಜೋಳ ರಾಶಿಯನ್ನು ಹಾಕಲಾಗಿತ್ತು. ಮೇಲ್ಭಾಗದಲ್ಲಿ ಜೋಳದ ಸಾಗಾಟ ನಡೆಸುತ್ತಿರುವ ರೀತಿ ಬಿಂಬಿಸಲಾಗಿತ್ತು. ಪೊಲೀಸರು ತಪಾಸಣೆ ನಡೆಸಿದಾಗ, ಬೃಹತ್ ಗಾಂಜಾ ಸಾಗಾಟ ಜಾಲ ಬಯಲಾಗಿದೆ. ವಾಹನ ಮತ್ತು ಸೊತ್ತುಗಳ ಜೊತೆ ಮೂವರನ್ನು ಬಂಧಿಸಿದ್ದು ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (26) , ಮಂಜೇಶ್ವರದ ಮಜೀರ್ ಪಳ್ಳ ನಿವಾಸಿ ಮೊಹಮ್ಮದ್ ಶಫೀಕ್ (31), ಕನ್ಯಾನ ಗ್ರಾಮದ ನಿವಾಸಿ ಖಲಂದರ್ ಶಾಫಿ(26) ವಿರುದ್ಧ ಎನ್ ಡಿಪಿಎಸ್ ಏಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಇಬ್ರಾಹಿಂ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ, ಖಲಂದರ್ ಶಾಫಿ ವಿರುದ್ಧ 2 ಅಕ್ರಮ ಗಾಂಜಾ ಅಕ್ರಮ ಪ್ರಕರಣ, ಒಂದು ಕೊಲೆ ಯತ್ನ ಪ್ರಕರಣ ಹಾಗೂ ಕಾವೂರು ಠಾಣೆಯಲ್ಲಿ ಒಂದು ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm