ಬ್ರೇಕಿಂಗ್ ನ್ಯೂಸ್
22-03-26 12:10 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 22: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾಗಿ ಸಂದೇಶ್ ವಿರುದ್ಧ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಾರ್ಚ್ 21ರಂದು ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ವೇಣೂರು ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರು 2018ರಿಂದ 2023 ರ ವರೆಗೆ ಆಗಿಂದಾಗ್ಗೆ ಮನೆಗೆ ಬಂದು ಬಲವಂತವಾಗಿ ಅತ್ಯಾಚಾರ ಮಾಡಿರುವುದಾಗಿ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಇದರಂತೆ, ಪೊಲೀಸರು 376(2)ಎ 1, 376(2)ಎನ್, 384, 506 ಅಡಿ ಪ್ರಕರಣ ದಾಖಲಿಸಿದ್ದಾರೆ.
ಇನ್ಸ್ ಪೆಕ್ಟರ್ ಸಂದೇಶ್ ಹಲವಾರು ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದು ಹಲವರನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದಾಗಿ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ಹೋಗಿತ್ತು. ಆದರೆ ಕಿರುಕುಳಕ್ಕೆ ಒಳಗಾದ ಯಾವುದೇ ಸಂತ್ರಸ್ತರು ದೂರು ನೀಡದ ಕಾರಣ ಪ್ರಕರಣ ಗಂಭೀರತೆ ಪಡೆದಿರಲಿಲ್ಲ. ಅಸಭ್ಯವಾಗಿ ಮಾತನಾಡಿದ ಆಡಿಯೋ ಮತ್ತು ಅಸಭ್ಯ ರೀತಿ ಮಹಿಳೆ ಜೊತೆಗೆ ಪೊಲೀಸ್ ಯೂನಿಫಾರ್ಮ್ ನಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಹಿನ್ನೆಲೆಯಲ್ಲಿ ಸಂದೇಶ್ ಅವರನ್ನು ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದರು.
ಇಲಾಖಾ ತನಿಖೆಗಾಗಿ ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ಹೊಣೆ ನೀಡಲಾಗಿತ್ತು. ತನಿಖೆಯ ವೇಳೆ ಯಾವುದೇ ಮಹಿಳೆ ತನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹೇಳಿಕೆ ನೀಡುವುದಾಗಲೀ, ದೂರು ನೀಡುವುದಾಗಲೀ ಮಾಡದೇ ಇದ್ದುದರಿಂದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಾಕ್ಷ್ಯ ಸಿಕ್ಕಿಲ್ಲವೆಂದು ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದರು. ದುರ್ನಡತೆ ತೋರಿದ್ದಕ್ಕಾಗಿ ಅವರನ್ನು ಅಮಾನತು ಪಡಿಸಿದ್ದು ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸಂದೇಶ್ ಬಗ್ಗೆ ಕಮಿಷನರ್ ಮೃದು ಧೋರಣೆ ತಳೆದಿದ್ದಾರೆಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವೇಣೂರು ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದು ಪ್ರಕರಣ ಗಂಭೀರತೆ ಪಡೆದಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am