ಬ್ರೇಕಿಂಗ್ ನ್ಯೂಸ್
22-03-26 12:10 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 22: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾಗಿ ಸಂದೇಶ್ ವಿರುದ್ಧ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಾರ್ಚ್ 21ರಂದು ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ವೇಣೂರು ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರು 2018ರಿಂದ 2023 ರ ವರೆಗೆ ಆಗಿಂದಾಗ್ಗೆ ಮನೆಗೆ ಬಂದು ಬಲವಂತವಾಗಿ ಅತ್ಯಾಚಾರ ಮಾಡಿರುವುದಾಗಿ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಇದರಂತೆ, ಪೊಲೀಸರು 376(2)ಎ 1, 376(2)ಎನ್, 384, 506 ಅಡಿ ಪ್ರಕರಣ ದಾಖಲಿಸಿದ್ದಾರೆ.
ಇನ್ಸ್ ಪೆಕ್ಟರ್ ಸಂದೇಶ್ ಹಲವಾರು ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದು ಹಲವರನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದಾಗಿ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ಹೋಗಿತ್ತು. ಆದರೆ ಕಿರುಕುಳಕ್ಕೆ ಒಳಗಾದ ಯಾವುದೇ ಸಂತ್ರಸ್ತರು ದೂರು ನೀಡದ ಕಾರಣ ಪ್ರಕರಣ ಗಂಭೀರತೆ ಪಡೆದಿರಲಿಲ್ಲ. ಅಸಭ್ಯವಾಗಿ ಮಾತನಾಡಿದ ಆಡಿಯೋ ಮತ್ತು ಅಸಭ್ಯ ರೀತಿ ಮಹಿಳೆ ಜೊತೆಗೆ ಪೊಲೀಸ್ ಯೂನಿಫಾರ್ಮ್ ನಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಹಿನ್ನೆಲೆಯಲ್ಲಿ ಸಂದೇಶ್ ಅವರನ್ನು ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದರು.
ಇಲಾಖಾ ತನಿಖೆಗಾಗಿ ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ಹೊಣೆ ನೀಡಲಾಗಿತ್ತು. ತನಿಖೆಯ ವೇಳೆ ಯಾವುದೇ ಮಹಿಳೆ ತನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹೇಳಿಕೆ ನೀಡುವುದಾಗಲೀ, ದೂರು ನೀಡುವುದಾಗಲೀ ಮಾಡದೇ ಇದ್ದುದರಿಂದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಾಕ್ಷ್ಯ ಸಿಕ್ಕಿಲ್ಲವೆಂದು ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದರು. ದುರ್ನಡತೆ ತೋರಿದ್ದಕ್ಕಾಗಿ ಅವರನ್ನು ಅಮಾನತು ಪಡಿಸಿದ್ದು ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸಂದೇಶ್ ಬಗ್ಗೆ ಕಮಿಷನರ್ ಮೃದು ಧೋರಣೆ ತಳೆದಿದ್ದಾರೆಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವೇಣೂರು ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದು ಪ್ರಕರಣ ಗಂಭೀರತೆ ಪಡೆದಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm