ಬ್ರೇಕಿಂಗ್ ನ್ಯೂಸ್
22-03-26 12:10 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 22: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾಗಿ ಸಂದೇಶ್ ವಿರುದ್ಧ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಾರ್ಚ್ 21ರಂದು ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ವೇಣೂರು ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರು 2018ರಿಂದ 2023 ರ ವರೆಗೆ ಆಗಿಂದಾಗ್ಗೆ ಮನೆಗೆ ಬಂದು ಬಲವಂತವಾಗಿ ಅತ್ಯಾಚಾರ ಮಾಡಿರುವುದಾಗಿ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಇದರಂತೆ, ಪೊಲೀಸರು 376(2)ಎ 1, 376(2)ಎನ್, 384, 506 ಅಡಿ ಪ್ರಕರಣ ದಾಖಲಿಸಿದ್ದಾರೆ.
ಇನ್ಸ್ ಪೆಕ್ಟರ್ ಸಂದೇಶ್ ಹಲವಾರು ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದು ಹಲವರನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದಾಗಿ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ಹೋಗಿತ್ತು. ಆದರೆ ಕಿರುಕುಳಕ್ಕೆ ಒಳಗಾದ ಯಾವುದೇ ಸಂತ್ರಸ್ತರು ದೂರು ನೀಡದ ಕಾರಣ ಪ್ರಕರಣ ಗಂಭೀರತೆ ಪಡೆದಿರಲಿಲ್ಲ. ಅಸಭ್ಯವಾಗಿ ಮಾತನಾಡಿದ ಆಡಿಯೋ ಮತ್ತು ಅಸಭ್ಯ ರೀತಿ ಮಹಿಳೆ ಜೊತೆಗೆ ಪೊಲೀಸ್ ಯೂನಿಫಾರ್ಮ್ ನಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಹಿನ್ನೆಲೆಯಲ್ಲಿ ಸಂದೇಶ್ ಅವರನ್ನು ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದರು.
ಇಲಾಖಾ ತನಿಖೆಗಾಗಿ ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ಹೊಣೆ ನೀಡಲಾಗಿತ್ತು. ತನಿಖೆಯ ವೇಳೆ ಯಾವುದೇ ಮಹಿಳೆ ತನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹೇಳಿಕೆ ನೀಡುವುದಾಗಲೀ, ದೂರು ನೀಡುವುದಾಗಲೀ ಮಾಡದೇ ಇದ್ದುದರಿಂದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಾಕ್ಷ್ಯ ಸಿಕ್ಕಿಲ್ಲವೆಂದು ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದರು. ದುರ್ನಡತೆ ತೋರಿದ್ದಕ್ಕಾಗಿ ಅವರನ್ನು ಅಮಾನತು ಪಡಿಸಿದ್ದು ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸಂದೇಶ್ ಬಗ್ಗೆ ಕಮಿಷನರ್ ಮೃದು ಧೋರಣೆ ತಳೆದಿದ್ದಾರೆಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವೇಣೂರು ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದು ಪ್ರಕರಣ ಗಂಭೀರತೆ ಪಡೆದಿದೆ.
08-05-26 12:21 pm
HK News Staffer
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೊಲೀಸ್ ಠಾಣೆಯಲ್ಲೇ ಹೈಡ್ರಾಮಾ ; ಪೋಕ್ಸೋ ಕೇಸ್ ಭಯಕ್ಕ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm