ಬ್ರೇಕಿಂಗ್ ನ್ಯೂಸ್
22-03-26 07:30 pm HK News Staffer ಕರಾವಳಿ
ಉಡುಪಿ, ಮಾರ್ಚ್ 22: ಜಿಲ್ಲೆಯ ರಾಜಕೀಯದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಗ್ವಾದ ತೀವ್ರಗೊಂಡಿದೆ. ಮಾಜಿ ಶಾಸಕ ರಘುಪತಿ ಭಟ್ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಗಂಭೀರ ಆರೋಪಗಳನ್ನು ಹೊರ ಹಾಕಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬಡಾನಿಡಿಯೂರು ಗ್ರಾಮದಲ್ಲಿ ರೆಸಾರ್ಟ್ ನಿರ್ಮಾಣಕ್ಕಾಗಿ ಸಲ್ಲಿಸಿದ್ದ ಸಿಂಗಲ್ ಲೇಔಟ್ ಅರ್ಜಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಮಾಡಲಾಗುತ್ತಿದೆ ಎಂದು ಭಟ್ ಆರೋಪಿಸಿದ್ದಾರೆ. 2024ರ ಮಾರ್ಚ್ 20ರಂದು ಅರ್ಜಿ ಸಲ್ಲಿಸಿದ್ದರೂ, ಸಾಮಾನ್ಯವಾಗಿ ಮೂರು ತಿಂಗಳಲ್ಲಿ ಸಿಗಬೇಕಿದ್ದ ಅನುಮತಿ ಎರಡು ವರ್ಷವಾದರೂ ಲಭ್ಯವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಶಾಸಕರ ಒತ್ತಡದಿಂದಲೇ ಅನುಮತಿ ನೀಡಲು ಹಿಂಜರಿಯುತ್ತಿದ್ದಾರೆ ಎಂದು ಕಿಡಿಕಾರಿದ ಭಟ್, ಹೈಕೋರ್ಟ್ 30 ದಿನಗಳಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ ಅದನ್ನು ಪಾಲಿಸಲಾಗಿಲ್ಲ ಎಂದು ಮತ್ತೊಂದು ಗಂಭೀರ ಆರೋಪವಾಗಿ ಮಾಡಿದ್ದಾರೆ. ಸಿ.ಆರ್.ಝೆಡ್ ಅನುಮತಿ, ಜೋನ್ ಚೇಂಜ್ ಹಾಗೂ ಕಮರ್ಷಿಯಲ್ ಕನ್ವರ್ಷನ್ ಸೇರಿದಂತೆ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ, ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಫೈಲ್ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕನ ಧೋರಣೆಯನ್ನು ಖಂಡಿಸಿ ಸೋಮವಾರದಿಂದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮುಂಭಾಗದಲ್ಲಿ ನಿರಂತರ ಧರಣಿ ಆರಂಭಿಸುವುದಾಗಿ ಭಟ್ ತಿಳಿಸಿದ್ದಾರೆ. “ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ. ಇದು ರಾಜಕೀಯ ಹೋರಾಟವಲ್ಲ, ವೈಯಕ್ತಿಕ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟ” ಎಂದು ಅವರು ಹೇಳಿದ್ದಾರೆ.
ಉಡುಪಿಯಲ್ಲಿ ಇಂತಹ ರಾಜಕೀಯ ದ್ವೇಷದ ಘಟನೆಗಳು ಅಪರೂಪವಾಗಿದ್ದು, ಬೇರೆ ಪಕ್ಷದವರಾದರೂ ವೈಯಕ್ತಿಕ ಉದ್ಯಮಗಳಿಗೆ ಅಡ್ಡಿಪಡಿಸುವ ಸಂಪ್ರದಾಯ ಇಲ್ಲ ಎಂದು ಅವರು ಹೇಳಿದರು. ಯಶ್ ಪಾಲ್ ಸುವರ್ಣ ಶಾಸಕರಾಗಲು ತಾನು ಸಹಕಾರ ನೀಡಿದ್ದೇನೆ ಎಂದು ನೆನಪಿಸಿಕೊಂಡ ಭಟ್, ಈಗ ಅದೇ ವ್ಯಕ್ತಿಯಿಂದ ಅಡಚಣೆ ಎದುರಿಸುತ್ತಿದ್ದೇನೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm