ಬ್ರೇಕಿಂಗ್ ನ್ಯೂಸ್
23-03-26 02:24 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 23: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮೂಡುಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಸಂತ್ರಸ್ತ ಮಹಿಳೆಯರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಂತ್ರಸ್ತೆಯರ ಅಹವಾಲು ಆಲಿಸಿದ ಗೃಹ ಸಚಿವ ಪರಮೇಶ್ವರ್ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ತಿಳಿಸಿದ್ದಾರೆ. ಬಳಿಕ ಮಾಧ್ಯಮಕ್ಕೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, "ಮೂಡುಬಿದ್ರೆ ಘಟನೆಯ ಕುರಿತು ಸಂತ್ರಸ್ತೆಯರು ನೀಡಿದ ಮಾಹಿತಿ ಆಧಾರದ ಮೇಲೆ ಸತ್ಯಾಸತ್ಯತೆ ತಿಳಿಯಬೇಕು. ಈ ಕಾರಣದಿಂದಲೇ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಸಂಬಂಧಪಟ್ಟ ಇನ್ಸ್ ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. 'ತನಿಖೆಯ ವರದಿಯನ್ನು ತುರ್ತಾಗಿ ನೀಡುವಂತೆ ಸೂಚಿಸಿದ್ದೇವೆ. ಕೃತ್ಯದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ಸಿಐಡಿ ತನಿಖೆಯಿಂದ ಸಂಪೂರ್ಣವಾಗಿ ಹೊರಬರಲಿದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳಾ ಆಯೋಗದ ಮಧ್ಯಸ್ಥಿಕೆ:
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆಯರನ್ನು ಗೃಹ ಸಚಿವರ ಬಳಿ ಕರೆದುಕೊಂಡು ಹೋಗಿದ್ದರು. ಸಂತ್ರಸ್ತೆಯರು ತಮ್ಮ ನೋವು ಮತ್ತು ಘಟನೆಯ ತೀವ್ರತೆಯನ್ನು ನನ್ನ ಮುಂದೆ ತೆರೆದಿಟ್ಟಿದ್ದರು. ಇದನ್ನು ನೇರವಾಗಿ ಗೃಹ ಸಚಿವರ ಗಮನಕ್ಕೆ ತರುವುದೇ ಸೂಕ್ತ ಎಂದು ನನಗೆ ಅನಿಸಿತು. ಅವರಿಗೆ ನ್ಯಾಯ ಸಿಗುವ ಏಕೈಕ ಉದ್ದೇಶದಿಂದ ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದೇನೆ' ಎಂದು ಚೌಧರಿ ಹೇಳಿದರು.
"ಗೃಹ ಸಚಿವರು ಸಂತ್ರಸ್ತೆಯವರ ಮಾತನ್ನು ಶ್ರದ್ಧೆಯಿಂದ ಕೇಳಿಕೊಂಡು, ಪ್ರಕರಣವನ್ನು ತಕ್ಷಣ ಸಿಐಡಿಗೆ ವರ್ಗಾಯಿಸಲು ಸೂಚಿಸಿದ್ದಾರೆ. ಸಂತ್ರಸ್ತೆಯರು ನೀಡಿದ ಸಾಕ್ಷ್ಯಗಳು ತನಿಖೆಗೆ ಪೂರಕವಾಗಿವೆ. ಸತ್ಯಾಸತ್ಯತೆ ಬೇಗವೇ ಬಹಿರಂಗವಾಗಲಿದೆ," ಎಂದರು. ಸರ್ಕಾರವು ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕ ನಂಬಿಕೆ ಉಳಿಸಿಕೊಳ್ಳಲು ಕಠಿಣ ಕ್ರಮ ಕೈಗೊಂಡಿದ್ದು, ಸಂತ್ರಸ್ತೆಯರಿಗೆ ಸೂಕ್ತ ಭದ್ರತೆ ಮತ್ತು ನ್ಯಾಯ ಒದಗಿಸುವಂತೆ ಭರವಸೆ ನೀಡಿದೆ.
08-05-26 12:21 pm
HK News Staffer
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೊಲೀಸ್ ಠಾಣೆಯಲ್ಲೇ ಹೈಡ್ರಾಮಾ ; ಪೋಕ್ಸೋ ಕೇಸ್ ಭಯಕ್ಕ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm