ಬ್ರೇಕಿಂಗ್ ನ್ಯೂಸ್
23-03-26 02:24 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 23: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮೂಡುಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಸಂತ್ರಸ್ತ ಮಹಿಳೆಯರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಂತ್ರಸ್ತೆಯರ ಅಹವಾಲು ಆಲಿಸಿದ ಗೃಹ ಸಚಿವ ಪರಮೇಶ್ವರ್ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ತಿಳಿಸಿದ್ದಾರೆ. ಬಳಿಕ ಮಾಧ್ಯಮಕ್ಕೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, "ಮೂಡುಬಿದ್ರೆ ಘಟನೆಯ ಕುರಿತು ಸಂತ್ರಸ್ತೆಯರು ನೀಡಿದ ಮಾಹಿತಿ ಆಧಾರದ ಮೇಲೆ ಸತ್ಯಾಸತ್ಯತೆ ತಿಳಿಯಬೇಕು. ಈ ಕಾರಣದಿಂದಲೇ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಸಂಬಂಧಪಟ್ಟ ಇನ್ಸ್ ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. 'ತನಿಖೆಯ ವರದಿಯನ್ನು ತುರ್ತಾಗಿ ನೀಡುವಂತೆ ಸೂಚಿಸಿದ್ದೇವೆ. ಕೃತ್ಯದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ಸಿಐಡಿ ತನಿಖೆಯಿಂದ ಸಂಪೂರ್ಣವಾಗಿ ಹೊರಬರಲಿದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳಾ ಆಯೋಗದ ಮಧ್ಯಸ್ಥಿಕೆ:
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆಯರನ್ನು ಗೃಹ ಸಚಿವರ ಬಳಿ ಕರೆದುಕೊಂಡು ಹೋಗಿದ್ದರು. ಸಂತ್ರಸ್ತೆಯರು ತಮ್ಮ ನೋವು ಮತ್ತು ಘಟನೆಯ ತೀವ್ರತೆಯನ್ನು ನನ್ನ ಮುಂದೆ ತೆರೆದಿಟ್ಟಿದ್ದರು. ಇದನ್ನು ನೇರವಾಗಿ ಗೃಹ ಸಚಿವರ ಗಮನಕ್ಕೆ ತರುವುದೇ ಸೂಕ್ತ ಎಂದು ನನಗೆ ಅನಿಸಿತು. ಅವರಿಗೆ ನ್ಯಾಯ ಸಿಗುವ ಏಕೈಕ ಉದ್ದೇಶದಿಂದ ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದೇನೆ' ಎಂದು ಚೌಧರಿ ಹೇಳಿದರು.
"ಗೃಹ ಸಚಿವರು ಸಂತ್ರಸ್ತೆಯವರ ಮಾತನ್ನು ಶ್ರದ್ಧೆಯಿಂದ ಕೇಳಿಕೊಂಡು, ಪ್ರಕರಣವನ್ನು ತಕ್ಷಣ ಸಿಐಡಿಗೆ ವರ್ಗಾಯಿಸಲು ಸೂಚಿಸಿದ್ದಾರೆ. ಸಂತ್ರಸ್ತೆಯರು ನೀಡಿದ ಸಾಕ್ಷ್ಯಗಳು ತನಿಖೆಗೆ ಪೂರಕವಾಗಿವೆ. ಸತ್ಯಾಸತ್ಯತೆ ಬೇಗವೇ ಬಹಿರಂಗವಾಗಲಿದೆ," ಎಂದರು. ಸರ್ಕಾರವು ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕ ನಂಬಿಕೆ ಉಳಿಸಿಕೊಳ್ಳಲು ಕಠಿಣ ಕ್ರಮ ಕೈಗೊಂಡಿದ್ದು, ಸಂತ್ರಸ್ತೆಯರಿಗೆ ಸೂಕ್ತ ಭದ್ರತೆ ಮತ್ತು ನ್ಯಾಯ ಒದಗಿಸುವಂತೆ ಭರವಸೆ ನೀಡಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am