ಬ್ರೇಕಿಂಗ್ ನ್ಯೂಸ್
24-03-26 05:34 pm HK News Staffer ಕರಾವಳಿ
ಉಡುಪಿ, ಮಾರ್ಚ್ 24: ನಕಲಿ ಬಂಗಾರದ ಆಭರಣಗಳನ್ನು ಬಳಸಿಕೊಂಡು ವಂಚನೆ ನಡೆಸಿದ ಪ್ರಕರಣದಲ್ಲಿ ಪಡುಬಿದ್ರಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ನಕಲಿ ಆಭರಣಗಳನ್ನು ನಿಜವಾದ ಬಂಗಾರ ಹಾಗೂ ನಗದು ಹಣಕ್ಕೆ ಬದಲಾಯಿಸಿ ಮೋಸ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಜನವರಿ 13ರಂದು ಕಾಪು ತಾಲೂಕು ನಾಡ್ಸಾಲು ಗ್ರಾಮದ ಹಳೆಯ ಅಂಚೆ ಕಚೇರಿ ಸಮೀಪ ಈ ಘಟನೆ ನಡೆದಿದೆ. ಬಸ್ಸಮ್ಮ ಎಂಬ ಮಹಿಳೆ ಆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓರ್ವ ಪುರುಷ ಹಾಗೂ ಮಹಿಳೆ ಅವರನ್ನು ಸಂಪರ್ಕಿಸಿದ್ದಾರೆ. ಅವರು ಬಂಗಾರದಂತೆ ಕಾಣುವ ಸರವನ್ನು ತೋರಿಸಿ, ಅದರಲ್ಲಿ ಲಕ್ಷ್ಮೀ ಲಾಕೆಟ್ ಇದ್ದು ಸುಮಾರು ಆರು ಪವನ್ ತೂಕವಿದೆ ಎಂದು ನಂಬಿಸಿದ್ದಾರೆ.
ಇವರ ಮಾತುಗಳನ್ನು ನಂಬಿದ ಬಸ್ಸಮ್ಮ, ಸುಮಾರು ಎರಡು ಸವರಣ ತೂಕದ ತನ್ನ ಬಂಗಾರದ ಆಭರಣಗಳು (ಸುಮಾರು ₹1.5 ಲಕ್ಷ ಮೌಲ್ಯದ) ಹಾಗೂ ₹6,000 ನಗದು ಹಣವನ್ನು ಅವರಿಗೆ ನೀಡಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ನಂತರ ಬಸ್ಸಮ್ಮ ಸಮೀಪದ ಆಭರಣ ಅಂಗಡಿಯಲ್ಲಿ ಸರವನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಬಹಿರಂಗವಾಗಿದೆ. ತಕ್ಷಣವೇ ಅವರು ಘಟನೆ ನಡೆದ ಸ್ಥಳಕ್ಕೆ ಹಿಂತಿರುಗಿದರೂ ಆರೋಪಿಗಳು ಆಗಲೇ ಎಸ್ಕೇಪ್ ಆಗಿದ್ದರು.
ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.
ಉಡುಪಿ ಜಿಲ್ಲಾ ಎಸ್ಪಿ ಹರಿರಾಮ ಶಂಕರ್ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್ ನಾಯಕ್, ಕಾರ್ಕಳ ಉಪವಿಭಾಗದ ಡಿಎಸ್ಪಿ ಎಸ್ ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಶಕ್ತಿವೇಲು ಹಾಗೂ ಅನಿಲ್ ಕುಮಾರ್ ಟಿ ನಾಯಕ್ ಅವರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿದೆ.
ತನಿಖೆ ವೇಳೆ, ಆರೋಪಿಗಳಲ್ಲಿ ಒಬ್ಬಳನ್ನು ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿಯ ಬುಡುಗನಹಳ್ಳಿ ನಿವಾಸಿ ಕಾವ್ಯ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ತಾಲೂಕಿನ ವೆಂಕಟೇಶ್ ಎಂದು ಪತ್ತೆಯಾಗಿದೆ.
ಪೊಲೀಸರು ಕಾವ್ಯಳನ್ನ ಬಂಧಿಸಿ, ಸುಮಾರು 7.610 ಗ್ರಾಂ ತೂಕದ (ಸುಮಾರು ₹75,000 ಮೌಲ್ಯದ) ಬಂಗಾರದ ಆಭರಣಗಳು ಹಾಗೂ ₹6,000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ವೆಂಕಟೇಶ್ ಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am