ಬ್ರೇಕಿಂಗ್ ನ್ಯೂಸ್
24-03-26 05:34 pm HK News Staffer ಕರಾವಳಿ
ಉಡುಪಿ, ಮಾರ್ಚ್ 24: ನಕಲಿ ಬಂಗಾರದ ಆಭರಣಗಳನ್ನು ಬಳಸಿಕೊಂಡು ವಂಚನೆ ನಡೆಸಿದ ಪ್ರಕರಣದಲ್ಲಿ ಪಡುಬಿದ್ರಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ನಕಲಿ ಆಭರಣಗಳನ್ನು ನಿಜವಾದ ಬಂಗಾರ ಹಾಗೂ ನಗದು ಹಣಕ್ಕೆ ಬದಲಾಯಿಸಿ ಮೋಸ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಜನವರಿ 13ರಂದು ಕಾಪು ತಾಲೂಕು ನಾಡ್ಸಾಲು ಗ್ರಾಮದ ಹಳೆಯ ಅಂಚೆ ಕಚೇರಿ ಸಮೀಪ ಈ ಘಟನೆ ನಡೆದಿದೆ. ಬಸ್ಸಮ್ಮ ಎಂಬ ಮಹಿಳೆ ಆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓರ್ವ ಪುರುಷ ಹಾಗೂ ಮಹಿಳೆ ಅವರನ್ನು ಸಂಪರ್ಕಿಸಿದ್ದಾರೆ. ಅವರು ಬಂಗಾರದಂತೆ ಕಾಣುವ ಸರವನ್ನು ತೋರಿಸಿ, ಅದರಲ್ಲಿ ಲಕ್ಷ್ಮೀ ಲಾಕೆಟ್ ಇದ್ದು ಸುಮಾರು ಆರು ಪವನ್ ತೂಕವಿದೆ ಎಂದು ನಂಬಿಸಿದ್ದಾರೆ.
ಇವರ ಮಾತುಗಳನ್ನು ನಂಬಿದ ಬಸ್ಸಮ್ಮ, ಸುಮಾರು ಎರಡು ಸವರಣ ತೂಕದ ತನ್ನ ಬಂಗಾರದ ಆಭರಣಗಳು (ಸುಮಾರು ₹1.5 ಲಕ್ಷ ಮೌಲ್ಯದ) ಹಾಗೂ ₹6,000 ನಗದು ಹಣವನ್ನು ಅವರಿಗೆ ನೀಡಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ನಂತರ ಬಸ್ಸಮ್ಮ ಸಮೀಪದ ಆಭರಣ ಅಂಗಡಿಯಲ್ಲಿ ಸರವನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಬಹಿರಂಗವಾಗಿದೆ. ತಕ್ಷಣವೇ ಅವರು ಘಟನೆ ನಡೆದ ಸ್ಥಳಕ್ಕೆ ಹಿಂತಿರುಗಿದರೂ ಆರೋಪಿಗಳು ಆಗಲೇ ಎಸ್ಕೇಪ್ ಆಗಿದ್ದರು.
ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ.
ಉಡುಪಿ ಜಿಲ್ಲಾ ಎಸ್ಪಿ ಹರಿರಾಮ ಶಂಕರ್ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್ ನಾಯಕ್, ಕಾರ್ಕಳ ಉಪವಿಭಾಗದ ಡಿಎಸ್ಪಿ ಎಸ್ ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಶಕ್ತಿವೇಲು ಹಾಗೂ ಅನಿಲ್ ಕುಮಾರ್ ಟಿ ನಾಯಕ್ ಅವರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿದೆ.
ತನಿಖೆ ವೇಳೆ, ಆರೋಪಿಗಳಲ್ಲಿ ಒಬ್ಬಳನ್ನು ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿಯ ಬುಡುಗನಹಳ್ಳಿ ನಿವಾಸಿ ಕಾವ್ಯ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ತಾಲೂಕಿನ ವೆಂಕಟೇಶ್ ಎಂದು ಪತ್ತೆಯಾಗಿದೆ.
ಪೊಲೀಸರು ಕಾವ್ಯಳನ್ನ ಬಂಧಿಸಿ, ಸುಮಾರು 7.610 ಗ್ರಾಂ ತೂಕದ (ಸುಮಾರು ₹75,000 ಮೌಲ್ಯದ) ಬಂಗಾರದ ಆಭರಣಗಳು ಹಾಗೂ ₹6,000 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ವೆಂಕಟೇಶ್ ಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 05:34 pm
HK News Staffer
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm