ಬ್ರೇಕಿಂಗ್ ನ್ಯೂಸ್
26-03-26 10:29 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ ಸೃಷ್ಟಿಸಿ ಸೈಬರ್ ವಂಚಕರು ಸಾರ್ವಜನಿಕರನ್ನು ಖೆಡ್ಡಾಕ್ಕೆ ಬೀಳಿಸಲು ಯತ್ನಿಸಿರುವ ಅಂಶ ಬೆಳಕಿಗೆ ಬಂದಿದ್ದು ಈ ಬಗ್ಗೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾರ್ಚ್ 25ರಂದು ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ಪ್ರತ್ಯೇಕ ನಕಲಿ ವೆಬ್ಸೈಟ್ (https://mangalorecitypolice.com/) ಇರುವುದು ಕಂಡುಬಂದಿದೆ. ಅಮಾಯಕ ಸಾರ್ವಜನಿಕರು ಮತ್ತು ಹಿರಿಯ ನಾಗರಿಕರನ್ನು ನಂಬಿಸಿ, ಅವರಿಂದ ಹಣ ಲೂಟಿ ಮಾಡುವ ದುರುದ್ದೇಶದಿಂದ ಈ ಜಾಲತಾಣವನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ನಕಲಿ ವೆಬ್ಸೈಟ್ನಲ್ಲಿ ಕೇವಲ ಮಾಹಿತಿ ಮಾತ್ರವಲ್ಲದೆ, ಅಪಾಯಕಾರಿ ಆನ್ಲೈನ್ ಗ್ಯಾಂಬ್ಲಿಂಗ್ (ಜೂಜಾಟ) ಗೇಮ್ಗಳನ್ನು ಅಳವಡಿಸಲಾಗಿದೆ.
‘ಗೇಟ್ಸ್ ಆಫ್ ಒಲಿಂಪಸ್’, ‘ಮಾಜಾಂಗ್ ವಿನ್ಸ್ 3’, ‘ಸ್ಟಾರ್ ಲೈಟ್ ಪ್ರಿನ್ಸೆಸ್ 1000’, ‘ಸ್ವೀಟ್ ಬೊನಾಂಜಾ’, ‘ಪೋಕರ್ ಒಮಾಹ’ ಸೇರಿದಂತೆ ನೂರಾರು ಜಾಕ್ಪಾಟ್ ಆಟಗಳು ಈ ಸೈಟ್ನಲ್ಲಿವೆ. ‘ಮಲ್ಟಿ ಸ್ಕ್ಯಾಟರ್ ಪ್ರಾಗ್ಮ್ಯಾಟಿಕ್’ ಎಂಬ ಹೆಸರಿನಡಿ ಈ ಆಟಗಳನ್ನು ಆಡಿಸಿ, ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುವ ಸಂಚು ರೂಪಿಸಲಾಗಿದೆ.
ಪೊಲೀಸ್ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿ ಸೈಬರ್ ವಂಚನೆ ಎಸಗುತ್ತಿರುವ ಅಪರಿಚಿತ ವ್ಯಕ್ತಿಗಳು ಹಾಗೂ ನಕಲಿ ವೆಬ್ಸೈಟ್ ಸೃಷ್ಟಿಕರ್ತರ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ಗಳನ್ನು ಹೊರತುಪಡಿಸಿ, ಇಂತಹ ಯಾವುದೇ ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಅದರಲ್ಲೂ ಹಣದ ಆಮಿಷ ಒಡ್ಡುವ ಆನ್ಲೈನ್ ಜೂಜಾಟದ ಸೈಟ್ಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೈಬರ್ ಪೊಲೀಸರು ಮನವಿ ಮಾಡಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am