ಬ್ರೇಕಿಂಗ್ ನ್ಯೂಸ್
30-03-26 02:06 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 30: ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಕೊರತೆಯಾಗಿದ್ದು ಸಕಾಲಕ್ಕೆ ಗ್ಯಾಸ್ ಸಿಗದೆ ಆಟೋ ಚಾಲಕರು ಫಿಲ್ಲಿಂಗ್ ಸ್ಟೇಶನ್ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಬಲ್ಮಠದ ಗೋ ಗ್ಯಾಸ್ ಹೆಸರಿನ ಆಟೋ ಎಲ್ಪಿಜಿ ಫಿಲ್ಲಿಂಗ್ ಸ್ಟೇಷನ್ ಮುಂದೆ ಆಟೋ ಚಾಲಕರು ಕಿಮೀ ಉದ್ದಕ್ಕೂ ಕ್ಯೂ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಲು ಕಾರಣವಾಗಿದೆ.
ಗ್ಯಾಸ್ ಸ್ಟೇಶನ್ ಮುಂದೆ ಆಟೋಗಳು ಸಾಲುಗಟ್ಟಿದ್ದು ಯಾವಾಗ ಗ್ಯಾಸ್ ಸಿಗುತ್ತದೆ ಎಂಬ ಆತಂಕದಲ್ಲಿದ್ದಾರೆ. ಗ್ಯಾಸ್ ಸ್ಟೇಶನ್ ನಲ್ಲಿ ಫಿಲ್ಲಿಂಗ್ ಮಾಡುತ್ತಿದ್ದರೂ ಆಟೋ ಚಾಲಕರು ಗ್ಯಾಸ್ ಕೊರತೆ ಇದೆಯೆಂಬ ವದಂತಿಗೀಡಾಗಿದ್ದು ಸ್ಟೇಶನ್ ಮುಂದೆ ಸೇರಿದ್ದಾರೆ. ಪಂಪ್ ನಲ್ಲಿ ಗ್ಯಾಸ್ ಇದೆಯೆಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಆಟೋ ಚಾಲಕರು ರಸ್ತೆಯಲ್ಲಿ ಸಾಲುಗಟ್ಟಿದ್ದರಿಂದ ಟ್ರಾಫಿಕ್ ತೊಂದರೆಯಾಗಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡುತ್ತಿದ್ದಾರೆ. ಎಸ್ ಸಿಎಸ್ ಆಸ್ಪತ್ರೆ ರಸ್ತೆಯ ಉದ್ದಕ್ಕೂ ಆಟೋಗಳು ಸಾಲುಗಟ್ಟಿ ನಿಂತಿವೆ.




ಇದೇ ವೇಳೆ, ಆಟೋ ಗ್ಯಾಸ್ ದರವು ಎಪ್ರಿಲ್ 1ರ ಬಳಿಕ ಏರಿಕೆಯಾಗುತ್ತದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಗ್ಯಾಸ್ ಸ್ಟೇಶನ್ ಕಡೆಯಿಂದಲೇ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಆಟೋ ಸಿಎನ್ ಜಿ ಸ್ಟೇಶನ್ ಹಲವು ಕಡೆ ಲಭ್ಯವಿದ್ದರೂ ಎಲ್ಪಿಜಿ ಸ್ಟೇಶನ್ ಹೆಚ್ಚಿಲ್ಲ. ಮಂಗಳೂರು ನಗರ ಒಳಭಾಗದಲ್ಲಿ ಬಲ್ಮಟದ ಈ ಸ್ಟೇಶನ್ ನಲ್ಲಿ ಮಾತ್ರ ಲಭ್ಯ ಇದೆ. ಹೀಗಾಗಿ ನಾಡಿದ್ದು ಬೆಲೆ ಏರುತ್ತದೆ ಮತ್ತು ಗ್ಯಾಸ್ ಕೊರತೆಯಾಗುತ್ತದೆ ಎಂಬ ವದಂತಿ ನಂಬಿ ಆಟೋ ಚಾಲಕರು ಸ್ಟೇಶನ್ ಮುಂದೆ ಸಾಲುಗಟ್ಟಿದ್ದಾರೆ. ಆದರೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಿಲ್ಲ, ಆಟೋ ಚಾಲಕರು ಕೂಡ ಗಾಬರಿಯಾಗಬೇಡಿ ಎಂದು ಕಿವಿಮಾತು ಹೇಳಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm