ಬ್ರೇಕಿಂಗ್ ನ್ಯೂಸ್
03-01-21 11:31 pm Mangaluru Correspondent ಕರಾವಳಿ
ಮಂಗಳೂರು, ಜ.3: ಮಂಗಳೂರು ನಗರಕ್ಕೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕರ್ತವ್ಯ ಆರಂಭಿಸಿದ ಎರಡೇ ದಿನದಲ್ಲಿ ಪೊಲೀಸರಿಗೆ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಿದ್ದಾರೆ.
ಮಂಗಳೂರಿನ ಬರ್ಕೆ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲು ಸೂಚಿಸಿದ್ದಾರೆ. ರಾತ್ರಿ ವೇಳೆ ವಿನಾಕಾರಣ ರಸ್ತೆಯಲ್ಲಿ ಓಡಾಡುವುದು, ಬಾರ್, ಹೊಟೇಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತುಕೊಳ್ಳುವುದು, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವುದನ್ನು ತಪ್ಪಿಸಲು ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.


ಪಾರ್ಕ್, ಮೈದಾನ, ಬಸ್ ನಿಲ್ದಾಣಗಳಲ್ಲಿ ಟಾರ್ಗೆಟ್ ಇಟ್ಟುಕೊಂಡು ಈ ರೀತಿಯ ಆಪರೇಶನ್ ನಡೆಯಲಿದೆ. ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದವರು ಅಪರಾಧ ಹಿನ್ನೆಲೆ ಹೊಂದಿದ್ದರೆ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ ಸೇರಿದಂತೆ ಎಸಿಪಿ, ಹತ್ತು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ಮತ್ತು 50 ಮಂದಿ ಸಿಬಂದಿ ಇರಲಿದ್ದಾರೆ. ಆರಂಭಿಕವಾಗಿ ಎರಡು ಠಾಣೆ ವ್ಯಾಪ್ತಿಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಯಲಿದ್ದು ಮುಂದಿನ ದಿನಗಳಲ್ಲಿ ಬೇರೆ ಠಾಣೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಅಗತ್ಯ ಬಿದ್ದರೆ ತಾನು ಕೂಡ ಬರಲಿದ್ದೇನೆ ಎಂದಿದ್ದಾರೆ.
ಪೊಲೀಸರು, ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧಿಗಳಲ್ಲಿ ಭಯ ಮೂಡಿಸುವುದು, ಅಪರಾಧಿಗಳನ್ನು ಮಟ್ಟ ಹಾಕುವುದು ಇದರ ಉದ್ದೇಶ. ರಾತ್ರಿ ವೇಳೆ ರಾಜಾರೋಷವಾಗಿ ವರ್ತಿಸುವುದು, ಎಲ್ಲೆಂದರಲ್ಲಿ ಕುಡಿಯುವುದು ಇಂಥ ಕೃತ್ಯಗಳಿಂದ ಮತ್ತೊಂದು ರೀತಿಯ ಅಪರಾಧಗಳಿಗೆ ಪ್ರೇರಣೆ ಸಿಗುವುದು. ಇದಕ್ಕಾಗಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
New Mangalore Commissioner of Police Shashi Kumar has issued strict rules for drunkards and night wanderers just in two days of his posting in the city.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am