ಬ್ರೇಕಿಂಗ್ ನ್ಯೂಸ್
03-01-21 11:31 pm Mangaluru Correspondent ಕರಾವಳಿ
ಮಂಗಳೂರು, ಜ.3: ಮಂಗಳೂರು ನಗರಕ್ಕೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕರ್ತವ್ಯ ಆರಂಭಿಸಿದ ಎರಡೇ ದಿನದಲ್ಲಿ ಪೊಲೀಸರಿಗೆ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಿದ್ದಾರೆ.
ಮಂಗಳೂರಿನ ಬರ್ಕೆ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲು ಸೂಚಿಸಿದ್ದಾರೆ. ರಾತ್ರಿ ವೇಳೆ ವಿನಾಕಾರಣ ರಸ್ತೆಯಲ್ಲಿ ಓಡಾಡುವುದು, ಬಾರ್, ಹೊಟೇಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತುಕೊಳ್ಳುವುದು, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವುದನ್ನು ತಪ್ಪಿಸಲು ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.


ಪಾರ್ಕ್, ಮೈದಾನ, ಬಸ್ ನಿಲ್ದಾಣಗಳಲ್ಲಿ ಟಾರ್ಗೆಟ್ ಇಟ್ಟುಕೊಂಡು ಈ ರೀತಿಯ ಆಪರೇಶನ್ ನಡೆಯಲಿದೆ. ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದವರು ಅಪರಾಧ ಹಿನ್ನೆಲೆ ಹೊಂದಿದ್ದರೆ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ ಸೇರಿದಂತೆ ಎಸಿಪಿ, ಹತ್ತು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ಮತ್ತು 50 ಮಂದಿ ಸಿಬಂದಿ ಇರಲಿದ್ದಾರೆ. ಆರಂಭಿಕವಾಗಿ ಎರಡು ಠಾಣೆ ವ್ಯಾಪ್ತಿಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಯಲಿದ್ದು ಮುಂದಿನ ದಿನಗಳಲ್ಲಿ ಬೇರೆ ಠಾಣೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಅಗತ್ಯ ಬಿದ್ದರೆ ತಾನು ಕೂಡ ಬರಲಿದ್ದೇನೆ ಎಂದಿದ್ದಾರೆ.
ಪೊಲೀಸರು, ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧಿಗಳಲ್ಲಿ ಭಯ ಮೂಡಿಸುವುದು, ಅಪರಾಧಿಗಳನ್ನು ಮಟ್ಟ ಹಾಕುವುದು ಇದರ ಉದ್ದೇಶ. ರಾತ್ರಿ ವೇಳೆ ರಾಜಾರೋಷವಾಗಿ ವರ್ತಿಸುವುದು, ಎಲ್ಲೆಂದರಲ್ಲಿ ಕುಡಿಯುವುದು ಇಂಥ ಕೃತ್ಯಗಳಿಂದ ಮತ್ತೊಂದು ರೀತಿಯ ಅಪರಾಧಗಳಿಗೆ ಪ್ರೇರಣೆ ಸಿಗುವುದು. ಇದಕ್ಕಾಗಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
New Mangalore Commissioner of Police Shashi Kumar has issued strict rules for drunkards and night wanderers just in two days of his posting in the city.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm