ಬ್ರೇಕಿಂಗ್ ನ್ಯೂಸ್
03-01-21 11:31 pm Mangaluru Correspondent ಕರಾವಳಿ
ಮಂಗಳೂರು, ಜ.3: ಮಂಗಳೂರು ನಗರಕ್ಕೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕರ್ತವ್ಯ ಆರಂಭಿಸಿದ ಎರಡೇ ದಿನದಲ್ಲಿ ಪೊಲೀಸರಿಗೆ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಿದ್ದಾರೆ.
ಮಂಗಳೂರಿನ ಬರ್ಕೆ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲು ಸೂಚಿಸಿದ್ದಾರೆ. ರಾತ್ರಿ ವೇಳೆ ವಿನಾಕಾರಣ ರಸ್ತೆಯಲ್ಲಿ ಓಡಾಡುವುದು, ಬಾರ್, ಹೊಟೇಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತುಕೊಳ್ಳುವುದು, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವುದನ್ನು ತಪ್ಪಿಸಲು ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.


ಪಾರ್ಕ್, ಮೈದಾನ, ಬಸ್ ನಿಲ್ದಾಣಗಳಲ್ಲಿ ಟಾರ್ಗೆಟ್ ಇಟ್ಟುಕೊಂಡು ಈ ರೀತಿಯ ಆಪರೇಶನ್ ನಡೆಯಲಿದೆ. ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದವರು ಅಪರಾಧ ಹಿನ್ನೆಲೆ ಹೊಂದಿದ್ದರೆ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ ಸೇರಿದಂತೆ ಎಸಿಪಿ, ಹತ್ತು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ಮತ್ತು 50 ಮಂದಿ ಸಿಬಂದಿ ಇರಲಿದ್ದಾರೆ. ಆರಂಭಿಕವಾಗಿ ಎರಡು ಠಾಣೆ ವ್ಯಾಪ್ತಿಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಯಲಿದ್ದು ಮುಂದಿನ ದಿನಗಳಲ್ಲಿ ಬೇರೆ ಠಾಣೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಅಗತ್ಯ ಬಿದ್ದರೆ ತಾನು ಕೂಡ ಬರಲಿದ್ದೇನೆ ಎಂದಿದ್ದಾರೆ.
ಪೊಲೀಸರು, ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧಿಗಳಲ್ಲಿ ಭಯ ಮೂಡಿಸುವುದು, ಅಪರಾಧಿಗಳನ್ನು ಮಟ್ಟ ಹಾಕುವುದು ಇದರ ಉದ್ದೇಶ. ರಾತ್ರಿ ವೇಳೆ ರಾಜಾರೋಷವಾಗಿ ವರ್ತಿಸುವುದು, ಎಲ್ಲೆಂದರಲ್ಲಿ ಕುಡಿಯುವುದು ಇಂಥ ಕೃತ್ಯಗಳಿಂದ ಮತ್ತೊಂದು ರೀತಿಯ ಅಪರಾಧಗಳಿಗೆ ಪ್ರೇರಣೆ ಸಿಗುವುದು. ಇದಕ್ಕಾಗಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
New Mangalore Commissioner of Police Shashi Kumar has issued strict rules for drunkards and night wanderers just in two days of his posting in the city.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm