ಬ್ರೇಕಿಂಗ್ ನ್ಯೂಸ್
06-04-26 07:58 pm HK News Staffer ಕರಾವಳಿ
ಬೆಳ್ತಂಗಡಿ, ಎಪ್ರಿಲ್ 6: ಇತ್ತೀಚೆಗೆ ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದಿಂದಾಗಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಪ್ರಿಲ್ 6ರ ಬೆಳಗ್ಗೆ 10 ಗಂಟೆ ಸುಮಾರಿಗೆ ಶವ ಕಾಣಸಿಕ್ಕಿದ್ದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿದ್ದಾರೆ.
ಸುಮಾರು 40-50 ವರ್ಷ ಪ್ರಾಯದ ಪ್ಯಾಂಟ್, ಶರ್ಟ್ ಹಾಕಿರುವ ಗಂಡಸಿನ ಮೃತದೇಹವಾಗಿದ್ದು ಕೊಳೆತು ನಾರುವ ಸ್ಥಿತಿಯಲ್ಲಿತ್ತು. ಮೃತದೇಹವು ಎತ್ತರ 5.7 ಅಡಿ, ಸಾಧಾರಣ ಶರೀರವಾಗಿದ್ದು, ಕೊಳೆತಿರುವುದರಿಂದ ಯಾವುದೇ ಚಹರೆ ಗುರುತು ಪತ್ತೆಯಾಗಿಲ್ಲ. ಮೈಮೇಲೆ ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಬನಿಯನ್, ಕಪ್ಪು ಬಣ್ಣದ ಒಳ ಚಡ್ಡಿ, ಎಡಗೈಯಲ್ಲಿ ಗೋಲ್ಡನ್ ಕಲರಿನ ವಾಚ್, ಎಡಕೈ ಉಗುಂರ ಬೆರಳಿನಲ್ಲಿ ತಿಳಿನೀಲಿ ಬಣ್ಣದ ಕಲ್ಲು ಇರುವ ಲೋಹದ ಉಂಗುರ ಧರಿಸಿದೆ.
ಶವ ಪೂರ್ತಿ ಕೊಳೆತು ಬಾತುಕೊಂಡಿದ್ದು ಹತ್ತು ದಿನಗಳ ಹಿಂದೆ ಸತ್ತಿರಬಹುದು ಎನ್ನುವ ಶಂಕೆಯಿದೆ. ಆತ್ಮಹತ್ಯೆಯೋ, ಯಾವ ರೀತಿಯಲ್ಲಿ ಸಾವು ಸಂಭವಿಸಿದೆ ಎನ್ನುವುದು ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸರು ಪೋಸ್ಟ್ ಮಾರ್ಟಂ ನಡೆಸಲು ಶವವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಸದ್ರಿ ವ್ಯಕ್ತಿಯ ವಾರೀಸುದಾರರು ಅಥವಾ ಸಂಬಂಧಿಕರು ಇದ್ದರೆ ಧರ್ಮಸ್ಥಳ ಠಾಣೆಗೆ ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಬಂಗ್ಲೆಗುಡ್ಡೆ ಕಾಡಿನಲ್ಲಿ ಹಲವಾರು ಅಸ್ಥಿಪಂಜರಗಳು ಸಿಕ್ಕಿವೆ ಎನ್ನುವ ಗುಮಾನಿ ಹಬ್ಬಿತ್ತು. ನೂರಾರು ಶವ ಹೂತ ಪ್ರಕರಣ ಸಂಬಂಧಿಸಿ ರಚನೆಯಾಗಿದ್ದ ವಿಶೇಷ ತನಿಖಾ ತಂಡ ಕಾಡಿನಲ್ಲಿ ಶೋಧ ಕಾರ್ಯ ನಡೆಸಿತ್ತು. ಪುತ್ತೂರು ವಿಭಾಗಾಧಿಕಾರಿ ನೇತೃತ್ವದಲ್ಲಿ ಅಸ್ಥಿಗಳನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಪ್ರಕರಣ ಕುರಿತಾಗಿ ಎಸ್ಐಟಿ ತಂಡವು ಕೋರ್ಟಿಗೆ ಪ್ರಾಥಮಿಕ ವರದಿಯನ್ನೂ ಸಲ್ಲಿಸಿತ್ತು. ಶವ ಹೂತ ಪ್ರಕರಣ ತಾರ್ಕಿಕ ಅಂತ್ಯ ಕಂಡಿಲ್ಲವಾದರೂ ಈ ನಡುವೆ ಅದೇ ಜಾಗದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವುದು ಮತ್ತೆ ಸುದ್ದಿಗೆ ಗ್ರಾಸವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am