ಬ್ರೇಕಿಂಗ್ ನ್ಯೂಸ್
06-04-26 07:58 pm HK News Staffer ಕರಾವಳಿ
ಬೆಳ್ತಂಗಡಿ, ಎಪ್ರಿಲ್ 6: ಇತ್ತೀಚೆಗೆ ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದಿಂದಾಗಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಪ್ರಿಲ್ 6ರ ಬೆಳಗ್ಗೆ 10 ಗಂಟೆ ಸುಮಾರಿಗೆ ಶವ ಕಾಣಸಿಕ್ಕಿದ್ದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿದ್ದಾರೆ.
ಸುಮಾರು 40-50 ವರ್ಷ ಪ್ರಾಯದ ಪ್ಯಾಂಟ್, ಶರ್ಟ್ ಹಾಕಿರುವ ಗಂಡಸಿನ ಮೃತದೇಹವಾಗಿದ್ದು ಕೊಳೆತು ನಾರುವ ಸ್ಥಿತಿಯಲ್ಲಿತ್ತು. ಮೃತದೇಹವು ಎತ್ತರ 5.7 ಅಡಿ, ಸಾಧಾರಣ ಶರೀರವಾಗಿದ್ದು, ಕೊಳೆತಿರುವುದರಿಂದ ಯಾವುದೇ ಚಹರೆ ಗುರುತು ಪತ್ತೆಯಾಗಿಲ್ಲ. ಮೈಮೇಲೆ ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಬನಿಯನ್, ಕಪ್ಪು ಬಣ್ಣದ ಒಳ ಚಡ್ಡಿ, ಎಡಗೈಯಲ್ಲಿ ಗೋಲ್ಡನ್ ಕಲರಿನ ವಾಚ್, ಎಡಕೈ ಉಗುಂರ ಬೆರಳಿನಲ್ಲಿ ತಿಳಿನೀಲಿ ಬಣ್ಣದ ಕಲ್ಲು ಇರುವ ಲೋಹದ ಉಂಗುರ ಧರಿಸಿದೆ.
ಶವ ಪೂರ್ತಿ ಕೊಳೆತು ಬಾತುಕೊಂಡಿದ್ದು ಹತ್ತು ದಿನಗಳ ಹಿಂದೆ ಸತ್ತಿರಬಹುದು ಎನ್ನುವ ಶಂಕೆಯಿದೆ. ಆತ್ಮಹತ್ಯೆಯೋ, ಯಾವ ರೀತಿಯಲ್ಲಿ ಸಾವು ಸಂಭವಿಸಿದೆ ಎನ್ನುವುದು ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸರು ಪೋಸ್ಟ್ ಮಾರ್ಟಂ ನಡೆಸಲು ಶವವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಸದ್ರಿ ವ್ಯಕ್ತಿಯ ವಾರೀಸುದಾರರು ಅಥವಾ ಸಂಬಂಧಿಕರು ಇದ್ದರೆ ಧರ್ಮಸ್ಥಳ ಠಾಣೆಗೆ ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಬಂಗ್ಲೆಗುಡ್ಡೆ ಕಾಡಿನಲ್ಲಿ ಹಲವಾರು ಅಸ್ಥಿಪಂಜರಗಳು ಸಿಕ್ಕಿವೆ ಎನ್ನುವ ಗುಮಾನಿ ಹಬ್ಬಿತ್ತು. ನೂರಾರು ಶವ ಹೂತ ಪ್ರಕರಣ ಸಂಬಂಧಿಸಿ ರಚನೆಯಾಗಿದ್ದ ವಿಶೇಷ ತನಿಖಾ ತಂಡ ಕಾಡಿನಲ್ಲಿ ಶೋಧ ಕಾರ್ಯ ನಡೆಸಿತ್ತು. ಪುತ್ತೂರು ವಿಭಾಗಾಧಿಕಾರಿ ನೇತೃತ್ವದಲ್ಲಿ ಅಸ್ಥಿಗಳನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಪ್ರಕರಣ ಕುರಿತಾಗಿ ಎಸ್ಐಟಿ ತಂಡವು ಕೋರ್ಟಿಗೆ ಪ್ರಾಥಮಿಕ ವರದಿಯನ್ನೂ ಸಲ್ಲಿಸಿತ್ತು. ಶವ ಹೂತ ಪ್ರಕರಣ ತಾರ್ಕಿಕ ಅಂತ್ಯ ಕಂಡಿಲ್ಲವಾದರೂ ಈ ನಡುವೆ ಅದೇ ಜಾಗದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವುದು ಮತ್ತೆ ಸುದ್ದಿಗೆ ಗ್ರಾಸವಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm