ಬ್ರೇಕಿಂಗ್ ನ್ಯೂಸ್
10-04-26 09:49 pm Mangaluru Staffee ಕರಾವಳಿ
ಉಳ್ಳಾಲ, ಎ.10: ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ ನಿರ್ದೇಶಕರು, ಉಳ್ಳಾಲ ಬಂಡಿಕೊಟ್ಯ ನಿವಾಸಿ, ಭರತನಾಟ್ಯ ಗುರು ವಿದ್ವಾನ್ ಶ್ರಾವಣ್ ಉಳ್ಳಾಲ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂರು ತಿಂಗಳಿಂದ ಹಳದಿ ಕಾಮಾಲೆ ರೋಗದಿಂದ ಬಳಲುತ್ತಿದ್ದು, ಕಳೆದ ವಾರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಹಾಗೂ ಸಂಸ್ಥೆಯ ಗೌರವಾಧ್ಯಕ್ಷೆ ಶಕೀಲಾ ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ಮಂತ್ರ ನಾಟ್ಯಕಲಾ ಗುರುಕುಲವನ್ನು ಶ್ರಾವಣ್ ಉಳ್ಳಾಲ್ ಅವರು ಸಮರ್ಥವಾಗಿ ಮುನ್ನಡೆಸಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲೆಯನ್ನು ಕಲಿಸಿದ್ದರು.

ಪಂದನಲ್ಲೂರು ಶೈಲಿಯ ಭರತನಾಟ್ಯವನ್ನು ದೇಶದ ವಿವಿಧ ರಾಜ್ಯಗಳಲ್ಲಿ ಪರಿಚಯಿಸಿ ಒರಿಸ್ಸಾ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಗುಜರಾತ್ ಸೇರಿದಂತೆ ಅನೇಕ ರಾಜ್ಯಗಳ ಸಾಂಸ್ಕೃತಿಕ ವೇದಿಕೆಗಳಲ್ಲಿ ಪ್ರದರ್ಶನ ನೀಡಿದ್ದರು. ವಿದೇಶಗಳಲ್ಲಿ ಭರತನಾಟ್ಯ, ಕೂಚುಪುಡಿ, ಕಥಕ್, ಒಡಿಸ್ಸಿ ಹಾಗೂ ಯಕ್ಷಗಾನಗಳ ಸಮ್ಮಿಲನದ ಪ್ರದರ್ಶನ ನೀಡಿದ್ದರು. ‘ಮೋಕ್ಷಂ’, ‘ರುದ್ರ ವೀರಭದ್ರ’, ‘ಶ್ರೀಕೃಷ್ಣ ಲೀಲಾಮೃತಂ’, ‘ತ್ರಿಶಕ್ತಿ’, ‘ನೃಸಿಂಹ ಚಲತಂ’, ‘ದಶ ಹಲರೂಪಂ’, ‘ಶಕ್ತಿ’ ಮೊದಲಾದ ನೃತ್ಯ ರೂಪಕಗಳ ಮೂಲಕ ಜನಮನ್ನಣೆ ಪಡೆದಿದ್ದರು.
ದೂರದರ್ಶನ ಗ್ರೇಡೆಡ್ ಕಲಾವಿದರಾಗಿದ್ದ ಶ್ರಾವಣ್ ಉಳ್ಳಾಲರು ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ವೀಣಾ ವಾದನದಲ್ಲೂ ಪರಿಣತಿ ಹೊಂದಿದ್ದರು. ನಾಟ್ಯ ಪ್ರವೀಣ ಪ್ರಶಸ್ತಿ, ಜನಪದ ಬಂಧು ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾಡಳಿತದ 2018ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ. ಶ್ರಾವಣ್ ಅವರು ಪತ್ನಿ ಶೈನಾ ಶ್ರಾವಣ್ ಮತ್ತು ಪುಟ್ಟ ಹೆಣ್ಣು ಮಗಳು ಮಂತ್ರ ಎಸ್ ಉಳ್ಳಾಲ್ ಅವರನ್ನ ಅಗಲಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am