ಬ್ರೇಕಿಂಗ್ ನ್ಯೂಸ್
10-04-26 09:49 pm Mangaluru Staffee ಕರಾವಳಿ
ಉಳ್ಳಾಲ, ಎ.10: ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ ನಿರ್ದೇಶಕರು, ಉಳ್ಳಾಲ ಬಂಡಿಕೊಟ್ಯ ನಿವಾಸಿ, ಭರತನಾಟ್ಯ ಗುರು ವಿದ್ವಾನ್ ಶ್ರಾವಣ್ ಉಳ್ಳಾಲ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೂರು ತಿಂಗಳಿಂದ ಹಳದಿ ಕಾಮಾಲೆ ರೋಗದಿಂದ ಬಳಲುತ್ತಿದ್ದು, ಕಳೆದ ವಾರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಹಾಗೂ ಸಂಸ್ಥೆಯ ಗೌರವಾಧ್ಯಕ್ಷೆ ಶಕೀಲಾ ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ಮಂತ್ರ ನಾಟ್ಯಕಲಾ ಗುರುಕುಲವನ್ನು ಶ್ರಾವಣ್ ಉಳ್ಳಾಲ್ ಅವರು ಸಮರ್ಥವಾಗಿ ಮುನ್ನಡೆಸಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲೆಯನ್ನು ಕಲಿಸಿದ್ದರು.

ಪಂದನಲ್ಲೂರು ಶೈಲಿಯ ಭರತನಾಟ್ಯವನ್ನು ದೇಶದ ವಿವಿಧ ರಾಜ್ಯಗಳಲ್ಲಿ ಪರಿಚಯಿಸಿ ಒರಿಸ್ಸಾ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಗುಜರಾತ್ ಸೇರಿದಂತೆ ಅನೇಕ ರಾಜ್ಯಗಳ ಸಾಂಸ್ಕೃತಿಕ ವೇದಿಕೆಗಳಲ್ಲಿ ಪ್ರದರ್ಶನ ನೀಡಿದ್ದರು. ವಿದೇಶಗಳಲ್ಲಿ ಭರತನಾಟ್ಯ, ಕೂಚುಪುಡಿ, ಕಥಕ್, ಒಡಿಸ್ಸಿ ಹಾಗೂ ಯಕ್ಷಗಾನಗಳ ಸಮ್ಮಿಲನದ ಪ್ರದರ್ಶನ ನೀಡಿದ್ದರು. ‘ಮೋಕ್ಷಂ’, ‘ರುದ್ರ ವೀರಭದ್ರ’, ‘ಶ್ರೀಕೃಷ್ಣ ಲೀಲಾಮೃತಂ’, ‘ತ್ರಿಶಕ್ತಿ’, ‘ನೃಸಿಂಹ ಚಲತಂ’, ‘ದಶ ಹಲರೂಪಂ’, ‘ಶಕ್ತಿ’ ಮೊದಲಾದ ನೃತ್ಯ ರೂಪಕಗಳ ಮೂಲಕ ಜನಮನ್ನಣೆ ಪಡೆದಿದ್ದರು.
ದೂರದರ್ಶನ ಗ್ರೇಡೆಡ್ ಕಲಾವಿದರಾಗಿದ್ದ ಶ್ರಾವಣ್ ಉಳ್ಳಾಲರು ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ವೀಣಾ ವಾದನದಲ್ಲೂ ಪರಿಣತಿ ಹೊಂದಿದ್ದರು. ನಾಟ್ಯ ಪ್ರವೀಣ ಪ್ರಶಸ್ತಿ, ಜನಪದ ಬಂಧು ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾಡಳಿತದ 2018ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ. ಶ್ರಾವಣ್ ಅವರು ಪತ್ನಿ ಶೈನಾ ಶ್ರಾವಣ್ ಮತ್ತು ಪುಟ್ಟ ಹೆಣ್ಣು ಮಗಳು ಮಂತ್ರ ಎಸ್ ಉಳ್ಳಾಲ್ ಅವರನ್ನ ಅಗಲಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm