ಬ್ರೇಕಿಂಗ್ ನ್ಯೂಸ್
10-04-26 10:12 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 10: ಸಂತ ಅಲೋಶಿಯಸ್ ಡೀಮ್ಡ್ ಯುನಿವರ್ಸಿಟಿಯ ಪ್ರೋ ಚಾನ್ಸಲರ್, ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸೂಟ್ ಎಜುಕೇಶನಲ್ ಸೊಸೈಟಿ ಇದರ ಉಪಾಧ್ಯಕ್ಷರಾಗಿದ್ದ ಫಾದರ್ ಮೆಲ್ವಿನ್ ಜೆ. ಪಿಂಟೋ(63) ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲೇ ಶಿಕ್ಷಣ ಪೂರೈಸಿ ಇಂಗ್ಲಿಷ್ ಎಂಎ ಮಾಡಿದ್ದ ಮೆಲ್ವಿನ್ ಪಿಂಟೋ ಅವರು 1980ರಲ್ಲಿ ಜೆಸೂಟ್ ಆಗಿ ಸೇರ್ಪಡೆಯಾಗಿದ್ದರು. ಇದಲ್ಲದೆ, ಸೈಕಾಲಜಿಯಲ್ಲಿ ಡಿಪ್ಲೊಮಾ, ಸ್ಕೂಲ್ ಅಡ್ಮಿನಿಸ್ಟ್ರೇಶನ್ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದರು. 1997ರಲ್ಲಿ ಜೆಸೂಟ್ ಫಾದರ್ ಆಗಿದ್ದು ಮೊದಲಿಗೆ ಹಾಸನದಲ್ಲಿ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ ಹೆಡ್ ಮಾಸ್ಟರ್ ಆಗಿದ್ದರು. ಆನಂತರ ಸೈಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜು ಸ್ಥಾಪಿಸಿ 2007ರ ತನಕ ಅದರ ಪ್ರಿನ್ಸಿಪಾಲ್ ಆಗಿದ್ದರು.
2007ರಿಂದ 11ರ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲಿನಲ್ಲಿ ಹೆಡ್ ಮಾಸ್ಟರ್ ಆಗಿದ್ದು, 2012ರಲ್ಲಿ ಮರಳಿ ಹಾಸನದ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇರಿದ್ದರು. ಫಾದರ್ ಮೆಲ್ವಿನ್ ಅವರು ವ್ಯಾಟಿಕನ್ ಕಮ್ಯುನಿಕೇಶನ್ಸ್ ಮತ್ತು ರೇಡಿಯೋ ರೋಮ್ ನಲ್ಲಿ ಏಷ್ಯಾ ಮತ್ತು ಭಾರತೀಯ ಭಾಷೆಗಳ ಪ್ರತಿನಿಧಿಯಾಗಿಯೂ ಕೆಲಸ ಮಾಡಿದ್ದರು. 2017ರ ಬಳಿಕ ಮಂಗಳೂರಿನ ವೆಲೆನ್ಸಿಯಾದ ಫಾತಿಮಾ ರಿಟ್ರೀಟ್ ಹೌಸ್ ನಲ್ಲಿ ಎರಡು ವರ್ಷಗಳ ಕಾಲ ಮುಖ್ಯಸ್ಥರಾಗಿದ್ದರು. ಆನಂತರ ಧಾರವಾಡದ ವಿದ್ಯಾನಿಕೇತನದಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಆಗಿದ್ದುಕೊಂಡು ಹಲವು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಲ್ಲಿ ನೆರವಾಗಿದ್ದರು. ಆಮೂಲಕ ವಿದ್ಯಾರ್ಥಿಗಳು, ಅಲ್ಲಿನ ಶಿಕ್ಷಕ ವೃಂದಕ್ಕೂ ಜನಾನುರಾಗಿಯಾಗಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm