ಬ್ರೇಕಿಂಗ್ ನ್ಯೂಸ್
10-04-26 10:12 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 10: ಸಂತ ಅಲೋಶಿಯಸ್ ಡೀಮ್ಡ್ ಯುನಿವರ್ಸಿಟಿಯ ಪ್ರೋ ಚಾನ್ಸಲರ್, ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸೂಟ್ ಎಜುಕೇಶನಲ್ ಸೊಸೈಟಿ ಇದರ ಉಪಾಧ್ಯಕ್ಷರಾಗಿದ್ದ ಫಾದರ್ ಮೆಲ್ವಿನ್ ಜೆ. ಪಿಂಟೋ(63) ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲೇ ಶಿಕ್ಷಣ ಪೂರೈಸಿ ಇಂಗ್ಲಿಷ್ ಎಂಎ ಮಾಡಿದ್ದ ಮೆಲ್ವಿನ್ ಪಿಂಟೋ ಅವರು 1980ರಲ್ಲಿ ಜೆಸೂಟ್ ಆಗಿ ಸೇರ್ಪಡೆಯಾಗಿದ್ದರು. ಇದಲ್ಲದೆ, ಸೈಕಾಲಜಿಯಲ್ಲಿ ಡಿಪ್ಲೊಮಾ, ಸ್ಕೂಲ್ ಅಡ್ಮಿನಿಸ್ಟ್ರೇಶನ್ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದರು. 1997ರಲ್ಲಿ ಜೆಸೂಟ್ ಫಾದರ್ ಆಗಿದ್ದು ಮೊದಲಿಗೆ ಹಾಸನದಲ್ಲಿ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ ಹೆಡ್ ಮಾಸ್ಟರ್ ಆಗಿದ್ದರು. ಆನಂತರ ಸೈಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜು ಸ್ಥಾಪಿಸಿ 2007ರ ತನಕ ಅದರ ಪ್ರಿನ್ಸಿಪಾಲ್ ಆಗಿದ್ದರು.
2007ರಿಂದ 11ರ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲಿನಲ್ಲಿ ಹೆಡ್ ಮಾಸ್ಟರ್ ಆಗಿದ್ದು, 2012ರಲ್ಲಿ ಮರಳಿ ಹಾಸನದ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇರಿದ್ದರು. ಫಾದರ್ ಮೆಲ್ವಿನ್ ಅವರು ವ್ಯಾಟಿಕನ್ ಕಮ್ಯುನಿಕೇಶನ್ಸ್ ಮತ್ತು ರೇಡಿಯೋ ರೋಮ್ ನಲ್ಲಿ ಏಷ್ಯಾ ಮತ್ತು ಭಾರತೀಯ ಭಾಷೆಗಳ ಪ್ರತಿನಿಧಿಯಾಗಿಯೂ ಕೆಲಸ ಮಾಡಿದ್ದರು. 2017ರ ಬಳಿಕ ಮಂಗಳೂರಿನ ವೆಲೆನ್ಸಿಯಾದ ಫಾತಿಮಾ ರಿಟ್ರೀಟ್ ಹೌಸ್ ನಲ್ಲಿ ಎರಡು ವರ್ಷಗಳ ಕಾಲ ಮುಖ್ಯಸ್ಥರಾಗಿದ್ದರು. ಆನಂತರ ಧಾರವಾಡದ ವಿದ್ಯಾನಿಕೇತನದಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಆಗಿದ್ದುಕೊಂಡು ಹಲವು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಲ್ಲಿ ನೆರವಾಗಿದ್ದರು. ಆಮೂಲಕ ವಿದ್ಯಾರ್ಥಿಗಳು, ಅಲ್ಲಿನ ಶಿಕ್ಷಕ ವೃಂದಕ್ಕೂ ಜನಾನುರಾಗಿಯಾಗಿದ್ದರು.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm